ಮೈಸೂರು

ಮುಡಾದ 50:50 ಪ್ರಕರಣ ವಿಚಾರ: ಸತ್ಯ ಮರೆ ಮಾಚಲು ಸಾಧ್ಯವಿಲ್ಲ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾದ 50:50 ಅನುಪಾತದ ಬದಲಿ ನಿವೇಶನ ಪ್ರಕರಣದಲ್ಲಿ ಯಾರಿಂದಲೂ ಸತ್ಯ ಮರೆ ಮಾಚಲು ಸಾಧ್ಯವಿಲ್ಲ ಎಂದು ದೂರುದಾರರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾದಿಂದ 50:50 ಅನುಪಾತದ ಬದಲಿ ನಿವೇಶನದಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಅಕ್ರಮವಾಗಿ ನಿವೇಶನಗಳನ್ನು ನೀಡಲಾಗಿದೆ. ಇದರಿಂದ ಮುಡಾಗೆ ಆರ್ಥಿಕ ನಷ್ಟವಾಗಿದೆ ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಆದರೆ ಒಂದು ಕಡೆ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಮುಡಾ ಕಚೇರಿಯೇ ನಿವೇಶನ ನೀಡಿದ್ದಾರೆ ಹೇಳದ್ದಾರೆ. ಮತ್ತೊಂದು ಕಡೆ ಈ ಪ್ರಕರಣದಲ್ಲಿ ಆರೋಪಿಗಳ ಪಾತ್ರವಿಲ್ಲವೆಂದು ಹೇಳಿದ್ದಾರೆ. ಹೀಗಾಗಿ ಸೋಮವಾರ(ಮಾರ್ಚ್.18) ನಾನೇ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದೇನೆ ಎಂದು ಹೇಳಿದರು.

ಈ ಪ್ರಕರಣದ ಬಗ್ಗೆ ವಾದ ಮಂಡನೆ ಮಾಡುವ ವೇಳೆ ನಿಖಾಧಿಕಾರಿ ಹೇಳಿದ್ದು, ವರದಿ ನೀಡಿದ್ದು ನಿಜವಲ್ಲ. ಅವರು ಸಿಎಂ ಪ್ರಭಾವಕ್ಕೆ ಸಿದ್ದರಾಮಯ್ಯ ಒಳಗಾಗಿ ವರದಿ ನೀಡಿದ್ದಾರೆಂದು ಹೇಳಿದ್ದೇನೆ. ಆದ್ದರಿಂದಲೇ ಕೋರ್ಟ್‌, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸ್ಪಷ್ಟೀಕರಣ ನೀಡುವಂತೆ ಆದೇಶ ಹೊರಡಿಸಿದೆ. ಅಲ್ಲದೇ ಈ ವಿಚಾರಣೆಯನ್ನು ಮಾರ್ಚ್.24ಕ್ಕೆ ಮುಂದೂಡಲಾಗಿದೆ. ಆ ದಿನ ಲೋಕಾಯುಕ್ತ ಅಧಿಕಾರಿಗಳು ಏನೂ ಸ್ಪಷ್ಟೀಕರಣ ನಿಡುತ್ತಾರೋ ನೀಡಲಿ. ಆದರೆ ಅಕ್ರಮ ಆಗಿರುವುದು ನಿಜವೆಂದು ನಾನು ಸಾಬೀತು ಮಾಡೇ ಮಾಡುತ್ತೇನೆ ಎಂದರು

ಅರ್ಚನ ಎಸ್‌ ಎಸ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

4 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

4 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

9 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago