ಮೈಸೂರು

ಮನಸ್ಸಿನ ಸಂಘರ್ಷ ಶಾಂತಗೊಳಿಸುವ ಸಂಗೀತ : ರಾಜ್ಯಪಾಲ ಗೆಹ್ಲೋಟ್‌

ಮೈಸೂರು : ಸಂಗೀತವು ಮನಸ್ಸಿನ ಸಂಘರ್ಷಗಳನ್ನು ಶಾಂತಗೊಳಿಸುವ, ಹಿಂಸೆಯನ್ನು ಕರುಣೆಯಾಗಿ ಪರಿವರ್ತಿಸುವ ಶಕ್ತಿಯನ್ನು ಹೊಂದಿದೆ ಎಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಹೇಳಿದರು.

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ೧೦ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕಲೆಯ ಉದ್ದೇಶ ಕೇವಲ ಅದನ್ನು ಪ್ರದರ್ಶಿಸುವುದಲ್ಲ, ಬದಲಾಗಿ ಸಮಾಜದಲ್ಲಿ ಸಂವೇದನೆ ಮತ್ತು ಸಾಮರಸ್ಯವನ್ನು ಉತ್ತೇಜಿಸುವುದಾಗಿದೆ ಎಂದರು.

ಭಾರತೀಯ ಸಂಸ್ಕ ತಿಯಲ್ಲಿ ಸಂಗೀತ ಮತ್ತು ಕಲೆಗೆ ಬಹಳ ಉನ್ನತ ಸ್ಥಾನವಿದೆ. ನಮ್ಮ ವೇದಗಳು ‘ನಾದೋಸ್ಮಿ ಪರಂ ಬ್ರಹ್ಮ‘ ಎಂದು ಹೇಳುತ್ತವೆ, ಅಂದರೆ ‘ಶಬ್ದವೇ ಪರಮಾತ್ಮ‘. ಈ ಶಬ್ದವು ಮಾನವರಲ್ಲಿ ಅಡಗಿರುವ ಸೌಂದರ್ಯ, ಕರುಣೆ ಮತ್ತು ಪ್ರೀತಿಯನ್ನು ಜಾಗೃತಗೊಳಿಸುವ ಶಕ್ತಿಯಾಗಿದೆ. ಸಂಗೀತವು ಹೃದಯವನ್ನು ಮೃದುಗೊಳಿಸುತ್ತದೆ, ಆಲೋಚನೆಗಳನ್ನು ಶುದ್ಧೀಕರಿಸುತ್ತದೆ ಮತ್ತು ಆತ್ಮವನ್ನು ಉನ್ನತೀಕರಿಸುತ್ತದೆ ಎಂದು ತಿಳಿಸಿದರು.

ಸಮಾಜವು ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಇಂದಿನ ಯುಗದಲ್ಲಿ, ಕಲಾವಿದರು ಮನುಷ್ಯರಲ್ಲಿ ಸಂವಹನ, ಸಹಾನುಭೂತಿ ಮತ್ತು ಸಾಮರಸ್ಯಕ್ಕೆ ದಾರಿ ಮಾಡಿಕೊಡುವ ಸೇತುವೆಯಾಗಿದ್ದಾರೆ. ಪ್ರಸ್ತುತ ವಿದ್ಯಾಮಾನದಲ್ಲಿ ತಂತ್ರಜ್ಞಾನ, ಡಿಜಿಟಲ್ ಮತ್ತು ಜಾಗತಿಕ ಪ್ರವೃತ್ತಿಗಳು ವೇಗವಾಗಿ ಬದಲಾಗುತ್ತಿರುವಾಗ, ನಮ್ಮ ಸಂಪ್ರದಾಯಗಳು, ನಮ್ಮ ಜಾನಪದ ಕಲೆಗಳಿಗೆ ಮರಳುವ, ಅವುಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಅವುಗಳಿಂದ ಸ್ಛೂರ್ತಿ ಪಡೆಯುವ ಅವಶ್ಯಕತೆಯಿದೆ ಎಂದು ಅಭಿಪ್ರಾಯಪಟ್ಟರು.

ಅಭಿವೃದ್ಧಿ ಹೊಂದಿದ ದೇಶದದತ್ತ ಭಾರತ ಸಾಗುತ್ತಿರುವಾಗ, ಸೃಜನಶೀಲ ಯುವಕರ ಪಾತ್ರ ಬಹಳ ಮುಖ್ಯ. ವಿದ್ಯಾರ್ಥಿಗಳೇ, ನಿಮ್ಮ ಕಲೆಯನ್ನು ಸಾರ್ವಜನಿಕ ಕಲ್ಯಾಣ ಮತ್ತು ರಾಷ್ಟ್ರ ನಿರ್ಮಾಣದ ಉದ್ದೇಶಕ್ಕೆ ಬಳಸಿಕೊಳ್ಳಿ. ನೆನಪಿಡಿ, ಕಲೆಯು ಮಾನವೀಯತೆಯ ಸೇವೆಗೆ ಸಮರ್ಪಿತವಾದಾಗ ಮಾತ್ರ ಅದು ಪೂರ್ಣಗೊಳ್ಳುತ್ತದೆ. ನಿಮ್ಮ ಸಂಗೀತ, ನೃತ್ಯ, ನಾಟಕ ಮತ್ತು ಪ್ರದರ್ಶನ ಕಲೆಗಳ ಮೂಲಕ ನೀವು ದೇಶದ ಸಾಂಸ್ಕ ತಿಕ ಏಕತೆಯನ್ನು ಬಲಪಡಿಸಬಹುದು ಎಂದು ಹೇಳಿದರು.

ಈ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ, ಪ್ರತಿಯೊಂದು ರಾಗ, ಪ್ರತಿ ಲಯ, ಪ್ರತಿ ಪ್ರದರ್ಶನವು ಈ ರಾಷ್ಟ್ರದ ಆತ್ಮದೊಂದಿಗೆ ಪ್ರತಿಧ್ವನಿಸುತ್ತದೆ. ನಿಮ್ಮ ಅಭಿವ್ಯಕ್ತಿಯ ಮೂಲಕ, ಸಾಮಾಜಿಕ ಉನ್ನತಿಯ ಸಂದೇಶವನ್ನು ಜನಸಾಮಾನ್ಯರಿಗೆ ಸರಳ ರೀತಿಯಲ್ಲಿ ತಲುಪಿಸಬಹುದು. ಡಿಜಿಟಲ್ ಯುಗವು ಸಂಗೀತದಲ್ಲಿ ಅನೇಕ ಅವಕಾಶಗಳನ್ನು ತೆರೆದಿದೆ.

ಆದರೆ ನೆನಪಿಡಿ – ತಂತ್ರಜ್ಞಾನವು ಕೇವಲ ಒಂದು ಸಾಧನ, ಆತ್ಮವಲ್ಲ. ಸಂಗೀತದ ಆತ್ಮವು ನಿಮ್ಮ ಅಭ್ಯಾಸ, ನಿಮ್ಮ ಸೂಕ್ಷ್ತ್ರ್ಮತೆ ಮತ್ತು ನಿಮ್ಮ ಸಮರ್ಪಣೆಯಾಗಿದೆ. ನೀವೆಲ್ಲರೂ ನಿಮ್ಮ ಕಲೆಯನ್ನು ಜೀವನದ ಘನತೆ, ನೈತಿಕತೆ ಮತ್ತು ಮಾನವೀಯ ಮೌಲ್ಯಗಳೊಂದಿಗೆ ಸಂಪರ್ಕಿಸಬೇಕೆಂದು ನಿರೀಕ್ಷಿಸಲಾಗಿದೆ. ನಿಮ್ಮ ಕಲೆ, ನಿಮ್ಮ ಅಭ್ಯಾಸ ಮತ್ತು ನಿಮ್ಮ ಸಮರ್ಪಣೆ ಭಾರತದ ಸಂಸ್ಕ ತಿಯನ್ನು ಸದಾ ಹೊಸದಾಗಿ ಮತ್ತು ಸದಾ ಚೈತನ್ಯಶೀಲವಾಗಿರಿಸಲಿ ಎಂದು ಶುಭ ಹಾರೈಸಿದರು.

ಇಂದಿನ ಘಟಿಕೋತ್ಸವವು ಕಲೆ, ಆಧ್ಯಾತ್ಮಿಕ ಅಭ್ಯಾಸ ಮತ್ತು ಸಂಸ್ಕ ತಿಯ ಸಂಗಮದ ಸಮಾರಂಭದಲ್ಲಿ ಕೇರಳದ ಕಲಾಮಂಡಲ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಅನಂತ ಕೃಷ್ಣನ್, ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ ಮತ್ತು ಮುಂತಾದ ಗಣ್ಯರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

4 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

5 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

7 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

7 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

8 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

8 hours ago