Mysore
22
broken clouds

Social Media

ಸೋಮವಾರ, 29 ಜೂನ್ 2026
Light
Dark

ಎಚ್.ಆರ್.ಲೀಲಾವತಿ, ವಸುಂಧರೆ ದೊರೆಸ್ವಾಮಿಗೆ ಸಂಗೀತ-ನಾಟಕ ಅಕಾಡೆಮಿ ಪ್ರಶಸ್ತಿ

ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸಂಗೀತ, ನಾಟಕ ಅಕಾಡೆಮಿಯು ಮೈಸೂರಿನ ಇಬ್ಬರೂ ಸೇರಿದಂತೆ ಕರ್ನಾಟಕದ ಐವರಿಗೆ ಸಂಗೀತ ನಾಟಕ ಅಕಾಡೆಮಿ ಅಮೃತ ಪ್ರಶಸ್ತಿ ಘೋಷಿಸಿದೆ. ಸುಗಮ ಸಂಗೀತದ ಹಿರಿಯ ಗಾಯಕಿ ಎಚ್.ಆರ್.ಲೀಲಾವತಿ ಹಾಗೂ ಭರತನಾಟ್ಯ ಕಲಾವಿದೆ ವಸುಂಧರ ದೊರೆಸ್ವಾಮಿ ಅವರು ಪ್ರಶಸ್ತಿ ಘೋಷಣೆ ಆಗಿರುವ ಬಗ್ಗೆ ‘ಆಂದೋಲನ’ದೊಂದಿಗೆ ಸಂತಸ ಹಂಚಿಕೊಂಡಿದ್ದಾರೆ.
ಎಚ್.ಆರ್.ಲೀಲಾವತಿ: ಕಲಾವಿದರು ತಮ್ಮ ಸಾಧನೆಯ ಹಾದಿಯನ್ನು ತುಳಿದು ಮುನ್ನಡೆಯಬೇಕು. ನಾನೆಂದೂ ಪ್ರಶಸ್ತಿಯ ಹಿಂದೆ ಬಿದ್ದವಳಲ್ಲ, ಜನರ ಪ್ರೀತಿ ಮತ್ತು ಮೆಚ್ಚುಗೆಯೇ ನನಗೆ ಪ್ರಶಸ್ತಿ. ತಡವಾದರೂ ನನ್ನ ಸಾಧನೆ ಯನ್ನು ಗುರುತಿಸಿ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆತಿರುವುದು ಖುಷಿ ನೀಡಿದೆ. ಕಲಾವಿದರ ಸಾಧನೆ ಮತ್ತು ಸಾಮರ್ಥ್ಯ, ಯೋಗ್ಯತೆಯ ಮೂಲಕ ವಯಸ್ಸಿರುವಾಗಲೇ ಗುರುತಿಸಿ ಪ್ರಶಸ್ತಿಗಳನ್ನು ಕೊಡ ಮಾಡಿದರೆ ಸಾಧಕರಿಗೆ ಹೆಚ್ಚು ಸಂಭ್ರಮವಿರಲಿದೆ ಎಂದರು.
ಡಾ.ವಸುಂಧರ ದೊರೆಸ್ವಾಮಿ: ತಡವಾಗಿಯಾದರು ಮೈಸೂರಿಗರಿಗೆ ಪ್ರಶಸ್ತಿ ದೊರೆತಿರುವುದು ಬಹಳ ಸಂತೋಷವಾಗಿದೆ. ಇದು ನನ್ನೊಬ್ಬಳಿಗೆ ಬಂದ ಪ್ರಶಸ್ತಿ ಅಲ್ಲ. ಮೈಸೂರಿಗೆ ಸಂದ ಗೌರವ. ಇದುವರೆಗೂ ಮೈಸೂರಿನ ಯಾರೊಬ್ಬರಿಗೂ ಈ ಪ್ರಶಸ್ತಿ ಲಭಿಸಿಲ್ಲ. ಹಲವಾರು ವರ್ಷಗಳಿಂದ ಕಲೆಯಲ್ಲಿ ಸೇವೆ ಸಲ್ಲಿಸಿದ ಕಾರಣ ತಡವಾಗಿಯಾದರೂ ಪ್ರಶಸ್ತಿ ದೊರೆತಿದೆ. ಮೈಸೂರಿನಲ್ಲಿ ನನ್ನಂತ ಕಲಾವಿದರು ಅನೇಕ ಮಂದಿ ಕಲೆಗಾಗಿ ತಮ್ಮ ಜೀವನ ಮುಡಿಪಿಟ್ಟು, ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪು ಮೂಡಿಸಿದ್ದು, ಅಂತಹವರನ್ನು ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಬೇಕು ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!