ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸಂಗೀತ, ನಾಟಕ ಅಕಾಡೆಮಿಯು ಮೈಸೂರಿನ ಇಬ್ಬರೂ ಸೇರಿದಂತೆ ಕರ್ನಾಟಕದ ಐವರಿಗೆ ಸಂಗೀತ ನಾಟಕ ಅಕಾಡೆಮಿ ಅಮೃತ ಪ್ರಶಸ್ತಿ ಘೋಷಿಸಿದೆ. ಸುಗಮ ಸಂಗೀತದ ಹಿರಿಯ ಗಾಯಕಿ ಎಚ್.ಆರ್.ಲೀಲಾವತಿ ಹಾಗೂ ಭರತನಾಟ್ಯ ಕಲಾವಿದೆ ವಸುಂಧರ ದೊರೆಸ್ವಾಮಿ ಅವರು ಪ್ರಶಸ್ತಿ ಘೋಷಣೆ ಆಗಿರುವ ಬಗ್ಗೆ ‘ಆಂದೋಲನ’ದೊಂದಿಗೆ ಸಂತಸ ಹಂಚಿಕೊಂಡಿದ್ದಾರೆ.
ಎಚ್.ಆರ್.ಲೀಲಾವತಿ: ಕಲಾವಿದರು ತಮ್ಮ ಸಾಧನೆಯ ಹಾದಿಯನ್ನು ತುಳಿದು ಮುನ್ನಡೆಯಬೇಕು. ನಾನೆಂದೂ ಪ್ರಶಸ್ತಿಯ ಹಿಂದೆ ಬಿದ್ದವಳಲ್ಲ, ಜನರ ಪ್ರೀತಿ ಮತ್ತು ಮೆಚ್ಚುಗೆಯೇ ನನಗೆ ಪ್ರಶಸ್ತಿ. ತಡವಾದರೂ ನನ್ನ ಸಾಧನೆ ಯನ್ನು ಗುರುತಿಸಿ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆತಿರುವುದು ಖುಷಿ ನೀಡಿದೆ. ಕಲಾವಿದರ ಸಾಧನೆ ಮತ್ತು ಸಾಮರ್ಥ್ಯ, ಯೋಗ್ಯತೆಯ ಮೂಲಕ ವಯಸ್ಸಿರುವಾಗಲೇ ಗುರುತಿಸಿ ಪ್ರಶಸ್ತಿಗಳನ್ನು ಕೊಡ ಮಾಡಿದರೆ ಸಾಧಕರಿಗೆ ಹೆಚ್ಚು ಸಂಭ್ರಮವಿರಲಿದೆ ಎಂದರು.
ಡಾ.ವಸುಂಧರ ದೊರೆಸ್ವಾಮಿ: ತಡವಾಗಿಯಾದರು ಮೈಸೂರಿಗರಿಗೆ ಪ್ರಶಸ್ತಿ ದೊರೆತಿರುವುದು ಬಹಳ ಸಂತೋಷವಾಗಿದೆ. ಇದು ನನ್ನೊಬ್ಬಳಿಗೆ ಬಂದ ಪ್ರಶಸ್ತಿ ಅಲ್ಲ. ಮೈಸೂರಿಗೆ ಸಂದ ಗೌರವ. ಇದುವರೆಗೂ ಮೈಸೂರಿನ ಯಾರೊಬ್ಬರಿಗೂ ಈ ಪ್ರಶಸ್ತಿ ಲಭಿಸಿಲ್ಲ. ಹಲವಾರು ವರ್ಷಗಳಿಂದ ಕಲೆಯಲ್ಲಿ ಸೇವೆ ಸಲ್ಲಿಸಿದ ಕಾರಣ ತಡವಾಗಿಯಾದರೂ ಪ್ರಶಸ್ತಿ ದೊರೆತಿದೆ. ಮೈಸೂರಿನಲ್ಲಿ ನನ್ನಂತ ಕಲಾವಿದರು ಅನೇಕ ಮಂದಿ ಕಲೆಗಾಗಿ ತಮ್ಮ ಜೀವನ ಮುಡಿಪಿಟ್ಟು, ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪು ಮೂಡಿಸಿದ್ದು, ಅಂತಹವರನ್ನು ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಬೇಕು ಎಂದರು.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…