ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸಂಗೀತ, ನಾಟಕ ಅಕಾಡೆಮಿಯು ಮೈಸೂರಿನ ಇಬ್ಬರೂ ಸೇರಿದಂತೆ ಕರ್ನಾಟಕದ ಐವರಿಗೆ ಸಂಗೀತ ನಾಟಕ ಅಕಾಡೆಮಿ ಅಮೃತ ಪ್ರಶಸ್ತಿ ಘೋಷಿಸಿದೆ. ಸುಗಮ ಸಂಗೀತದ ಹಿರಿಯ ಗಾಯಕಿ ಎಚ್.ಆರ್.ಲೀಲಾವತಿ ಹಾಗೂ ಭರತನಾಟ್ಯ ಕಲಾವಿದೆ ವಸುಂಧರ ದೊರೆಸ್ವಾಮಿ ಅವರು ಪ್ರಶಸ್ತಿ ಘೋಷಣೆ ಆಗಿರುವ ಬಗ್ಗೆ ‘ಆಂದೋಲನ’ದೊಂದಿಗೆ ಸಂತಸ ಹಂಚಿಕೊಂಡಿದ್ದಾರೆ.
ಎಚ್.ಆರ್.ಲೀಲಾವತಿ: ಕಲಾವಿದರು ತಮ್ಮ ಸಾಧನೆಯ ಹಾದಿಯನ್ನು ತುಳಿದು ಮುನ್ನಡೆಯಬೇಕು. ನಾನೆಂದೂ ಪ್ರಶಸ್ತಿಯ ಹಿಂದೆ ಬಿದ್ದವಳಲ್ಲ, ಜನರ ಪ್ರೀತಿ ಮತ್ತು ಮೆಚ್ಚುಗೆಯೇ ನನಗೆ ಪ್ರಶಸ್ತಿ. ತಡವಾದರೂ ನನ್ನ ಸಾಧನೆ ಯನ್ನು ಗುರುತಿಸಿ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆತಿರುವುದು ಖುಷಿ ನೀಡಿದೆ. ಕಲಾವಿದರ ಸಾಧನೆ ಮತ್ತು ಸಾಮರ್ಥ್ಯ, ಯೋಗ್ಯತೆಯ ಮೂಲಕ ವಯಸ್ಸಿರುವಾಗಲೇ ಗುರುತಿಸಿ ಪ್ರಶಸ್ತಿಗಳನ್ನು ಕೊಡ ಮಾಡಿದರೆ ಸಾಧಕರಿಗೆ ಹೆಚ್ಚು ಸಂಭ್ರಮವಿರಲಿದೆ ಎಂದರು.
ಡಾ.ವಸುಂಧರ ದೊರೆಸ್ವಾಮಿ: ತಡವಾಗಿಯಾದರು ಮೈಸೂರಿಗರಿಗೆ ಪ್ರಶಸ್ತಿ ದೊರೆತಿರುವುದು ಬಹಳ ಸಂತೋಷವಾಗಿದೆ. ಇದು ನನ್ನೊಬ್ಬಳಿಗೆ ಬಂದ ಪ್ರಶಸ್ತಿ ಅಲ್ಲ. ಮೈಸೂರಿಗೆ ಸಂದ ಗೌರವ. ಇದುವರೆಗೂ ಮೈಸೂರಿನ ಯಾರೊಬ್ಬರಿಗೂ ಈ ಪ್ರಶಸ್ತಿ ಲಭಿಸಿಲ್ಲ. ಹಲವಾರು ವರ್ಷಗಳಿಂದ ಕಲೆಯಲ್ಲಿ ಸೇವೆ ಸಲ್ಲಿಸಿದ ಕಾರಣ ತಡವಾಗಿಯಾದರೂ ಪ್ರಶಸ್ತಿ ದೊರೆತಿದೆ. ಮೈಸೂರಿನಲ್ಲಿ ನನ್ನಂತ ಕಲಾವಿದರು ಅನೇಕ ಮಂದಿ ಕಲೆಗಾಗಿ ತಮ್ಮ ಜೀವನ ಮುಡಿಪಿಟ್ಟು, ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪು ಮೂಡಿಸಿದ್ದು, ಅಂತಹವರನ್ನು ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಬೇಕು ಎಂದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…