ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸಂಗೀತ, ನಾಟಕ ಅಕಾಡೆಮಿಯು ಮೈಸೂರಿನ ಇಬ್ಬರೂ ಸೇರಿದಂತೆ ಕರ್ನಾಟಕದ ಐವರಿಗೆ ಸಂಗೀತ ನಾಟಕ ಅಕಾಡೆಮಿ ಅಮೃತ ಪ್ರಶಸ್ತಿ ಘೋಷಿಸಿದೆ. ಸುಗಮ ಸಂಗೀತದ ಹಿರಿಯ ಗಾಯಕಿ ಎಚ್.ಆರ್.ಲೀಲಾವತಿ ಹಾಗೂ ಭರತನಾಟ್ಯ ಕಲಾವಿದೆ ವಸುಂಧರ ದೊರೆಸ್ವಾಮಿ ಅವರು ಪ್ರಶಸ್ತಿ ಘೋಷಣೆ ಆಗಿರುವ ಬಗ್ಗೆ ‘ಆಂದೋಲನ’ದೊಂದಿಗೆ ಸಂತಸ ಹಂಚಿಕೊಂಡಿದ್ದಾರೆ.
ಎಚ್.ಆರ್.ಲೀಲಾವತಿ: ಕಲಾವಿದರು ತಮ್ಮ ಸಾಧನೆಯ ಹಾದಿಯನ್ನು ತುಳಿದು ಮುನ್ನಡೆಯಬೇಕು. ನಾನೆಂದೂ ಪ್ರಶಸ್ತಿಯ ಹಿಂದೆ ಬಿದ್ದವಳಲ್ಲ, ಜನರ ಪ್ರೀತಿ ಮತ್ತು ಮೆಚ್ಚುಗೆಯೇ ನನಗೆ ಪ್ರಶಸ್ತಿ. ತಡವಾದರೂ ನನ್ನ ಸಾಧನೆ ಯನ್ನು ಗುರುತಿಸಿ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆತಿರುವುದು ಖುಷಿ ನೀಡಿದೆ. ಕಲಾವಿದರ ಸಾಧನೆ ಮತ್ತು ಸಾಮರ್ಥ್ಯ, ಯೋಗ್ಯತೆಯ ಮೂಲಕ ವಯಸ್ಸಿರುವಾಗಲೇ ಗುರುತಿಸಿ ಪ್ರಶಸ್ತಿಗಳನ್ನು ಕೊಡ ಮಾಡಿದರೆ ಸಾಧಕರಿಗೆ ಹೆಚ್ಚು ಸಂಭ್ರಮವಿರಲಿದೆ ಎಂದರು.
ಡಾ.ವಸುಂಧರ ದೊರೆಸ್ವಾಮಿ: ತಡವಾಗಿಯಾದರು ಮೈಸೂರಿಗರಿಗೆ ಪ್ರಶಸ್ತಿ ದೊರೆತಿರುವುದು ಬಹಳ ಸಂತೋಷವಾಗಿದೆ. ಇದು ನನ್ನೊಬ್ಬಳಿಗೆ ಬಂದ ಪ್ರಶಸ್ತಿ ಅಲ್ಲ. ಮೈಸೂರಿಗೆ ಸಂದ ಗೌರವ. ಇದುವರೆಗೂ ಮೈಸೂರಿನ ಯಾರೊಬ್ಬರಿಗೂ ಈ ಪ್ರಶಸ್ತಿ ಲಭಿಸಿಲ್ಲ. ಹಲವಾರು ವರ್ಷಗಳಿಂದ ಕಲೆಯಲ್ಲಿ ಸೇವೆ ಸಲ್ಲಿಸಿದ ಕಾರಣ ತಡವಾಗಿಯಾದರೂ ಪ್ರಶಸ್ತಿ ದೊರೆತಿದೆ. ಮೈಸೂರಿನಲ್ಲಿ ನನ್ನಂತ ಕಲಾವಿದರು ಅನೇಕ ಮಂದಿ ಕಲೆಗಾಗಿ ತಮ್ಮ ಜೀವನ ಮುಡಿಪಿಟ್ಟು, ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪು ಮೂಡಿಸಿದ್ದು, ಅಂತಹವರನ್ನು ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಬೇಕು ಎಂದರು.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…