ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸಂಗೀತ, ನಾಟಕ ಅಕಾಡೆಮಿಯು ಮೈಸೂರಿನ ಇಬ್ಬರೂ ಸೇರಿದಂತೆ ಕರ್ನಾಟಕದ ಐವರಿಗೆ ಸಂಗೀತ ನಾಟಕ ಅಕಾಡೆಮಿ ಅಮೃತ ಪ್ರಶಸ್ತಿ ಘೋಷಿಸಿದೆ. ಸುಗಮ ಸಂಗೀತದ ಹಿರಿಯ ಗಾಯಕಿ ಎಚ್.ಆರ್.ಲೀಲಾವತಿ ಹಾಗೂ ಭರತನಾಟ್ಯ ಕಲಾವಿದೆ ವಸುಂಧರ ದೊರೆಸ್ವಾಮಿ ಅವರು ಪ್ರಶಸ್ತಿ ಘೋಷಣೆ ಆಗಿರುವ ಬಗ್ಗೆ ‘ಆಂದೋಲನ’ದೊಂದಿಗೆ ಸಂತಸ ಹಂಚಿಕೊಂಡಿದ್ದಾರೆ.
ಎಚ್.ಆರ್.ಲೀಲಾವತಿ: ಕಲಾವಿದರು ತಮ್ಮ ಸಾಧನೆಯ ಹಾದಿಯನ್ನು ತುಳಿದು ಮುನ್ನಡೆಯಬೇಕು. ನಾನೆಂದೂ ಪ್ರಶಸ್ತಿಯ ಹಿಂದೆ ಬಿದ್ದವಳಲ್ಲ, ಜನರ ಪ್ರೀತಿ ಮತ್ತು ಮೆಚ್ಚುಗೆಯೇ ನನಗೆ ಪ್ರಶಸ್ತಿ. ತಡವಾದರೂ ನನ್ನ ಸಾಧನೆ ಯನ್ನು ಗುರುತಿಸಿ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆತಿರುವುದು ಖುಷಿ ನೀಡಿದೆ. ಕಲಾವಿದರ ಸಾಧನೆ ಮತ್ತು ಸಾಮರ್ಥ್ಯ, ಯೋಗ್ಯತೆಯ ಮೂಲಕ ವಯಸ್ಸಿರುವಾಗಲೇ ಗುರುತಿಸಿ ಪ್ರಶಸ್ತಿಗಳನ್ನು ಕೊಡ ಮಾಡಿದರೆ ಸಾಧಕರಿಗೆ ಹೆಚ್ಚು ಸಂಭ್ರಮವಿರಲಿದೆ ಎಂದರು.
ಡಾ.ವಸುಂಧರ ದೊರೆಸ್ವಾಮಿ: ತಡವಾಗಿಯಾದರು ಮೈಸೂರಿಗರಿಗೆ ಪ್ರಶಸ್ತಿ ದೊರೆತಿರುವುದು ಬಹಳ ಸಂತೋಷವಾಗಿದೆ. ಇದು ನನ್ನೊಬ್ಬಳಿಗೆ ಬಂದ ಪ್ರಶಸ್ತಿ ಅಲ್ಲ. ಮೈಸೂರಿಗೆ ಸಂದ ಗೌರವ. ಇದುವರೆಗೂ ಮೈಸೂರಿನ ಯಾರೊಬ್ಬರಿಗೂ ಈ ಪ್ರಶಸ್ತಿ ಲಭಿಸಿಲ್ಲ. ಹಲವಾರು ವರ್ಷಗಳಿಂದ ಕಲೆಯಲ್ಲಿ ಸೇವೆ ಸಲ್ಲಿಸಿದ ಕಾರಣ ತಡವಾಗಿಯಾದರೂ ಪ್ರಶಸ್ತಿ ದೊರೆತಿದೆ. ಮೈಸೂರಿನಲ್ಲಿ ನನ್ನಂತ ಕಲಾವಿದರು ಅನೇಕ ಮಂದಿ ಕಲೆಗಾಗಿ ತಮ್ಮ ಜೀವನ ಮುಡಿಪಿಟ್ಟು, ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪು ಮೂಡಿಸಿದ್ದು, ಅಂತಹವರನ್ನು ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಬೇಕು ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…