ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸಂಗೀತ, ನಾಟಕ ಅಕಾಡೆಮಿಯು ಮೈಸೂರಿನ ಇಬ್ಬರೂ ಸೇರಿದಂತೆ ಕರ್ನಾಟಕದ ಐವರಿಗೆ ಸಂಗೀತ ನಾಟಕ ಅಕಾಡೆಮಿ ಅಮೃತ ಪ್ರಶಸ್ತಿ ಘೋಷಿಸಿದೆ. ಸುಗಮ ಸಂಗೀತದ ಹಿರಿಯ ಗಾಯಕಿ ಎಚ್.ಆರ್.ಲೀಲಾವತಿ ಹಾಗೂ ಭರತನಾಟ್ಯ ಕಲಾವಿದೆ ವಸುಂಧರ ದೊರೆಸ್ವಾಮಿ ಅವರು ಪ್ರಶಸ್ತಿ ಘೋಷಣೆ ಆಗಿರುವ ಬಗ್ಗೆ ‘ಆಂದೋಲನ’ದೊಂದಿಗೆ ಸಂತಸ ಹಂಚಿಕೊಂಡಿದ್ದಾರೆ.
ಎಚ್.ಆರ್.ಲೀಲಾವತಿ: ಕಲಾವಿದರು ತಮ್ಮ ಸಾಧನೆಯ ಹಾದಿಯನ್ನು ತುಳಿದು ಮುನ್ನಡೆಯಬೇಕು. ನಾನೆಂದೂ ಪ್ರಶಸ್ತಿಯ ಹಿಂದೆ ಬಿದ್ದವಳಲ್ಲ, ಜನರ ಪ್ರೀತಿ ಮತ್ತು ಮೆಚ್ಚುಗೆಯೇ ನನಗೆ ಪ್ರಶಸ್ತಿ. ತಡವಾದರೂ ನನ್ನ ಸಾಧನೆ ಯನ್ನು ಗುರುತಿಸಿ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆತಿರುವುದು ಖುಷಿ ನೀಡಿದೆ. ಕಲಾವಿದರ ಸಾಧನೆ ಮತ್ತು ಸಾಮರ್ಥ್ಯ, ಯೋಗ್ಯತೆಯ ಮೂಲಕ ವಯಸ್ಸಿರುವಾಗಲೇ ಗುರುತಿಸಿ ಪ್ರಶಸ್ತಿಗಳನ್ನು ಕೊಡ ಮಾಡಿದರೆ ಸಾಧಕರಿಗೆ ಹೆಚ್ಚು ಸಂಭ್ರಮವಿರಲಿದೆ ಎಂದರು.
ಡಾ.ವಸುಂಧರ ದೊರೆಸ್ವಾಮಿ: ತಡವಾಗಿಯಾದರು ಮೈಸೂರಿಗರಿಗೆ ಪ್ರಶಸ್ತಿ ದೊರೆತಿರುವುದು ಬಹಳ ಸಂತೋಷವಾಗಿದೆ. ಇದು ನನ್ನೊಬ್ಬಳಿಗೆ ಬಂದ ಪ್ರಶಸ್ತಿ ಅಲ್ಲ. ಮೈಸೂರಿಗೆ ಸಂದ ಗೌರವ. ಇದುವರೆಗೂ ಮೈಸೂರಿನ ಯಾರೊಬ್ಬರಿಗೂ ಈ ಪ್ರಶಸ್ತಿ ಲಭಿಸಿಲ್ಲ. ಹಲವಾರು ವರ್ಷಗಳಿಂದ ಕಲೆಯಲ್ಲಿ ಸೇವೆ ಸಲ್ಲಿಸಿದ ಕಾರಣ ತಡವಾಗಿಯಾದರೂ ಪ್ರಶಸ್ತಿ ದೊರೆತಿದೆ. ಮೈಸೂರಿನಲ್ಲಿ ನನ್ನಂತ ಕಲಾವಿದರು ಅನೇಕ ಮಂದಿ ಕಲೆಗಾಗಿ ತಮ್ಮ ಜೀವನ ಮುಡಿಪಿಟ್ಟು, ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪು ಮೂಡಿಸಿದ್ದು, ಅಂತಹವರನ್ನು ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಬೇಕು ಎಂದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…