ಮೈಸೂರು: ಇಲ್ಲಿನ ಸಂಗೀತ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ ನಡೆದ ಮೂರು ಶೈಕ್ಷಣಿಕ ವರ್ಷಗಳ ಘಟಿಕೋತ್ಸವದಲ್ಲಿ ಒಟ್ಟು 450 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. 27 ವಿದ್ಯಾರ್ಥಿಗಳು 69 ಚಿನ್ನದ ಪದಕಗಳೊಂದಿಗೆ ಸಂಭ್ರಮಿಸಿದರು.
2021-22 ನೇ ಸಾಲಿನಲ್ಲಿ ಎಂಪಿಎ ವಿಭಾಗದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ವಿಷಯದಲ್ಲಿ ರ್ಯಾಂಕ್ ಜೊತೆಗೆ 9 ಚಿನ್ನದ ಪದಕಗಳನ್ನು ವಿಶಾಖಪಟ್ಟಂ ಮೂಲದ ವಿ.ವಿಜಯಶ್ರೀ ಪಡೆದು ಗಮನ ಸೆಳೆದರು. ಬಿಟೆಕ್ ಪದವೀಧರೆಯಾಗಿರುವ ವಿಜಯಶ್ರೀ ಕಳೆದ 8 ವರ್ಷಗಳಿಂದ ಪತಿ ಮತ್ತು ಮಕ್ಕಳೊಂದಿಗೆ ಶ್ರೀರಂಗಪಟ್ಟಣದ ಬೆಳಗೋಳದಲ್ಲಿ ನೆಲೆಸಿದ್ದಾರೆ.
ಎಂಪಿಎ ವಿಭಾಗದಲ್ಲಿ 2022-23 ನೇ ಸಾಲಿನಲ್ಲಿ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ವಿಷಯದಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಎಲ್.ಬಿ.ಬಿಂದು 6 ಚಿನ್ನದ ಪದಕ ಪಡೆದರೆ, ಕೀರ್ತನಾ 5 ಚಿನ್ನ ಪಡೆದರು.
ಇನ್ನೂ 2023-24ನೇ ಸಾಲಿನಲ್ಲಿ ಕೆ.ಆರ್.ಅಶ್ವಿನಿ ಹಾಗೂ ಬಿ.ಆರ್.ಮನೋಜ್ ತಲಾ 6 ಚಿನ್ನದ ಪದಕ ಗಳಿಸಿದರು. ಬಿಪಿಎ ವಿಭಾಗದಲ್ಲಿ ಆರ್.ರಂಜಿನಿಶ್ರೀ 6, ಪಿ.ಆರ್.ರೂಪಾ 5 ಚಿನ್ನದ ಪದಕ ಪಡೆದರು. 14 ಮಂದಿಗೆ ಡಿ.ಲಿಟ್ ಪದವಿ ಪ್ರದಾನ ಮಾಡಲಾಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪದವಿ ಪ್ರದಾನ ಮಾಡಿದರು.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…