ಮೈಸೂರು: ಇಲ್ಲಿನ ಸಂಗೀತ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ ನಡೆದ ಮೂರು ಶೈಕ್ಷಣಿಕ ವರ್ಷಗಳ ಘಟಿಕೋತ್ಸವದಲ್ಲಿ ಒಟ್ಟು 450 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. 27 ವಿದ್ಯಾರ್ಥಿಗಳು 69 ಚಿನ್ನದ ಪದಕಗಳೊಂದಿಗೆ ಸಂಭ್ರಮಿಸಿದರು.
2021-22 ನೇ ಸಾಲಿನಲ್ಲಿ ಎಂಪಿಎ ವಿಭಾಗದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ವಿಷಯದಲ್ಲಿ ರ್ಯಾಂಕ್ ಜೊತೆಗೆ 9 ಚಿನ್ನದ ಪದಕಗಳನ್ನು ವಿಶಾಖಪಟ್ಟಂ ಮೂಲದ ವಿ.ವಿಜಯಶ್ರೀ ಪಡೆದು ಗಮನ ಸೆಳೆದರು. ಬಿಟೆಕ್ ಪದವೀಧರೆಯಾಗಿರುವ ವಿಜಯಶ್ರೀ ಕಳೆದ 8 ವರ್ಷಗಳಿಂದ ಪತಿ ಮತ್ತು ಮಕ್ಕಳೊಂದಿಗೆ ಶ್ರೀರಂಗಪಟ್ಟಣದ ಬೆಳಗೋಳದಲ್ಲಿ ನೆಲೆಸಿದ್ದಾರೆ.
ಎಂಪಿಎ ವಿಭಾಗದಲ್ಲಿ 2022-23 ನೇ ಸಾಲಿನಲ್ಲಿ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ವಿಷಯದಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಎಲ್.ಬಿ.ಬಿಂದು 6 ಚಿನ್ನದ ಪದಕ ಪಡೆದರೆ, ಕೀರ್ತನಾ 5 ಚಿನ್ನ ಪಡೆದರು.
ಇನ್ನೂ 2023-24ನೇ ಸಾಲಿನಲ್ಲಿ ಕೆ.ಆರ್.ಅಶ್ವಿನಿ ಹಾಗೂ ಬಿ.ಆರ್.ಮನೋಜ್ ತಲಾ 6 ಚಿನ್ನದ ಪದಕ ಗಳಿಸಿದರು. ಬಿಪಿಎ ವಿಭಾಗದಲ್ಲಿ ಆರ್.ರಂಜಿನಿಶ್ರೀ 6, ಪಿ.ಆರ್.ರೂಪಾ 5 ಚಿನ್ನದ ಪದಕ ಪಡೆದರು. 14 ಮಂದಿಗೆ ಡಿ.ಲಿಟ್ ಪದವಿ ಪ್ರದಾನ ಮಾಡಲಾಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪದವಿ ಪ್ರದಾನ ಮಾಡಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…