ಮೈಸೂರು: ಇಲ್ಲಿನ ಸಂಗೀತ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ ನಡೆದ ಮೂರು ಶೈಕ್ಷಣಿಕ ವರ್ಷಗಳ ಘಟಿಕೋತ್ಸವದಲ್ಲಿ ಒಟ್ಟು 450 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. 27 ವಿದ್ಯಾರ್ಥಿಗಳು 69 ಚಿನ್ನದ ಪದಕಗಳೊಂದಿಗೆ ಸಂಭ್ರಮಿಸಿದರು.
2021-22 ನೇ ಸಾಲಿನಲ್ಲಿ ಎಂಪಿಎ ವಿಭಾಗದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ವಿಷಯದಲ್ಲಿ ರ್ಯಾಂಕ್ ಜೊತೆಗೆ 9 ಚಿನ್ನದ ಪದಕಗಳನ್ನು ವಿಶಾಖಪಟ್ಟಂ ಮೂಲದ ವಿ.ವಿಜಯಶ್ರೀ ಪಡೆದು ಗಮನ ಸೆಳೆದರು. ಬಿಟೆಕ್ ಪದವೀಧರೆಯಾಗಿರುವ ವಿಜಯಶ್ರೀ ಕಳೆದ 8 ವರ್ಷಗಳಿಂದ ಪತಿ ಮತ್ತು ಮಕ್ಕಳೊಂದಿಗೆ ಶ್ರೀರಂಗಪಟ್ಟಣದ ಬೆಳಗೋಳದಲ್ಲಿ ನೆಲೆಸಿದ್ದಾರೆ.
ಎಂಪಿಎ ವಿಭಾಗದಲ್ಲಿ 2022-23 ನೇ ಸಾಲಿನಲ್ಲಿ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ವಿಷಯದಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಎಲ್.ಬಿ.ಬಿಂದು 6 ಚಿನ್ನದ ಪದಕ ಪಡೆದರೆ, ಕೀರ್ತನಾ 5 ಚಿನ್ನ ಪಡೆದರು.
ಇನ್ನೂ 2023-24ನೇ ಸಾಲಿನಲ್ಲಿ ಕೆ.ಆರ್.ಅಶ್ವಿನಿ ಹಾಗೂ ಬಿ.ಆರ್.ಮನೋಜ್ ತಲಾ 6 ಚಿನ್ನದ ಪದಕ ಗಳಿಸಿದರು. ಬಿಪಿಎ ವಿಭಾಗದಲ್ಲಿ ಆರ್.ರಂಜಿನಿಶ್ರೀ 6, ಪಿ.ಆರ್.ರೂಪಾ 5 ಚಿನ್ನದ ಪದಕ ಪಡೆದರು. 14 ಮಂದಿಗೆ ಡಿ.ಲಿಟ್ ಪದವಿ ಪ್ರದಾನ ಮಾಡಲಾಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪದವಿ ಪ್ರದಾನ ಮಾಡಿದರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…