ಮೈಸೂರು

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ

 

ಮಂಜು ಕೋಟೆ

ಎಚ್.ಡಿ.ಕೋಟೆ: ತಾಲ್ಲೂಕಿನ ಮುಸ್ಲಿಂ ಸಮುದಾಯದ  ಯುವತಿ ಒಬ್ಬರು ಪ್ರಪ್ರಥಮವಾಗಿ ಎಂಬಿಬಿಎಸ್ ವ್ಯಾಸಂಗ ಪೂರ್ಣಗೊಳಿಸಿ ವೈದ್ಯರಾಗಿ ದಾಖಲೆ ನಿರ್ಮಿಸಿದ್ದಾರೆ.

ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿ ಕೋಟೆ ಮತ್ತು ಜೆಜೆ ಡ್ರೈವಿಂಗ್ ಸ್ಕೂಲ್  ಮಾಲೀಕರಾದ ಜಮೀರ್ ಅಹಮದ್ ಮತ್ತು ಜಾಸ್ಮಿನ್ ದಂಪತಿಯ ಮೊದಲನೇ ಪುತ್ರಿ ಜಹಾನ ಫಿರ್ದೋಸ್ ವೈದ್ಯರಾಗಿ ಗಮನ ಸೆಳೆದಿದ್ದಾರೆ.

ಪಟ್ಟಣದ ಸೇಂಟ್ ಮೇರಿ ಶಾಲೆಯಲ್ಲಿ ಒಂದನೇ ತರಗತಿಯಿಂದ ಎಸ್‌ಎಸ್‌ಎಲ್‌ಸಿವರೆಗೆ, ನಂತರ ಆದಿಚುಂಚನಗಿರಿ ಕಾಲೇಜಿನಲ್ಲಿ ಪಿಯುಸಿ ಓದಿ, ಸರ್ಕಾರದ ಉಚಿತ ಪ್ರವೇಶದಲ್ಲಿ ಬೆಳ್ಳೂರ್ ಕ್ರಾಸ್ ಆದಿಚುಂಚನಗಿರಿ ವಿ.ವಿಯಲ್ಲಿ ಎಂಬಿಬಿಎಸ್ ಅನ್ನು ಐದು ವರ್ಷಗಳ ಕಾಲ ವ್ಯಾಸಂಗ ಮಾಡಿ ಅಧಿಕೃತವಾಗಿ ವೈದ್ಯರಾದ ಪ್ರವಾಣ ಪತ್ರ ಪಡೆದುಕೊಂಡಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಬಡ ಕುಟುಂಬದವರು ತಮ್ಮ ಮಕ್ಕಳನ್ನು ಎಂಬಿಬಿಎಸ್ ಮತ್ತು ಇಂಜಿನಿಯರಿಂಗ್ ಓದಿಸುವುದು ಕಷ್ಟವಿದೆ. ಅದರಲ್ಲೂ ಮುಸ್ಲಿಂ ಸಮುದಾಯದವರು ಹೆಣ್ಣು ಮಕ್ಕಳಿಗೆ ಉನ್ನತ ವ್ಯಾಸಂಗ ಮಾಡಿಸಿರುವುದು ವಿರಳವಾಗಿದೆ.

ತಾಲ್ಲೂಕಿನ ಹೊನ್ನಮ್ಮನಕಟ್ಟೆ ಗ್ರಾಮದಲ್ಲಿ ಬಡ ಕುಟುಂಬದ ರೈತಾಪಿ ವರ್ಗದಿಂದ ಬಂದ ಜಮೀರ್ ಅಹಮದ್ ದಂಪತಿ ತಮ್ಮ ಮೂವರು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕೆಂದು ೩೦ ವರ್ಷಗಳ ಹಿಂದೆ ಕೋಟೆ ಪಟ್ಟಣಕ್ಕೆ ಬಂದು ಡ್ರೈವಿಂಗ್ ಶಾಲೆ ತೆರೆದು ಕಷ್ಟಪಟ್ಟು ಮೊದಲನೇ ಪುತ್ರಿ ಜಹಾನ ಫಿರ್ದೋಸ್‌ರನ್ನು ವೈದ್ಯರನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಎರಡನೇ ಪುತ್ರಿ ಜಸ್ನ ಫಿರ್ದೋಸ್ ಬಿಎಸ್ಸಿ ಅಗ್ರಿ ಮುಗಿಸಿ  ಯುಪಿಎಸ್ ಪರೀಕ್ಷೆಗೆ ಸಿದ್ಧತೆ  ಮಾಡಿಕೊಂಡಿದ್ದಾರೆ. ಪುತ್ರ ಜಹಾಂಗೀರ್ ಅಹಮದ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ವಾಡಿದ್ದಾರೆ. ಎಲ್ಲರಿಗೂ ಸರ್ಕಾರದ ಉಚಿತ ಪ್ರವೇಶದ ಮೂಲಕವೇ ವ್ಯಾಸಂಗದ ಅವಕಾಶ ದೊರೆತಿರುವುದು ವಿಶೇಷವಾಗಿದೆ.

ಮುಸ್ಲಿಂ ಸಮುದಾಯದ ಜಹಾನ ಫಿರ್ದೋಸ್ ಎಂಬಿಬಿಎಸ್ ಮುಗಿಸಿ ವೈದ್ಯರಾಗಿರುವುದು ಇತರರಿಗೂ ಸ್ಫೂರ್ತಿ ಮೂಡಿಸಲಿದೆ. ಇಂಥವರನ್ನು ಪ್ರೋತ್ಸಾಹಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.

ನಮ್ಮ ಸಮುದಾಯದಲ್ಲಿ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯುವುದು ಬಹಳ ಕಡಿಮೆ. ನಮ್ಮ ತಂದೆ ತಾಯಿ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿ ನಮಗೆ ಎಂಥ ಕಷ್ಟದಲ್ಲೂ ಬೆಂಬಲ ನೀಡಿ ಪ್ರೋತ್ಸಾಹಿಸಿದ್ದಾರೆ. ಹೀಗಾಗಿ ಛಲದಿಂದ ಕಷ್ಟಪಟ್ಟು ಓದಿ ಗುರಿ ಇಟ್ಟುಕೊಂಡು ವೈದ್ಯೆಯಾಗಿದ್ದೇನೆ. ಮುಂದಿನ ದಿನದಲ್ಲಿ ಎಂಡಿ ವಾಡಬೇಕೆಂಬ ಗುರಿ ಹೊಂದಿದ್ದು, ವೈದ್ಯಕೀಯ ವೃತ್ತಿಯನ್ನು ನಮ್ಮ ತಾಲ್ಲೂಕಿನಲ್ಲಿ ಮಾಡುವ ಉದ್ದೇಶ ಹೊಂದಿದ್ದೇನೆ. -ಜಹಾನ ಫಿರ್ದೋಸ್, ವೈದ್ಯರು

ಕ್ತಿಮೀರಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿದ್ದೇವೆ. ಅವರಿಗೆ ಅತ್ಯುತ್ತಮವಾದ ಸ್ಥಾನಮಾನಗಳು, ಹುದ್ದೆಗಳು ಲಭಿಸುತ್ತಿರುವುದು ಸಂತಸ ತಂದಿದೆ. ನಮ್ಮ ಸಮುದಾಯದಲ್ಲಿ ವೈದ್ಯ ಹುದ್ದೆಯನ್ನು ನನ್ನ ಮಗಳು ಅಲಂಕರಿಸಿರುವುದು ಕಂಡು ಸಂತಸವಾಗಿದೆ. ಸಮುದಾಯದವರಿಗೂ ಇದು ಸ್ಫೂರ್ತಿ ಉಂಟುಮಾಡಲಿದೆ.
-ಜೆ.ಜೆ.ಜಮೀರ್ ಅಹಮದ್, ಜಹಾನ ತಂದೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago