ಮೈಸೂರು

ಮೈ-ಬೆಂ ಹೆದ್ದಾರಿ ಅಪಘಾತ | 2 ವರ್ಷದಲ್ಲಿ 1,674 ಅಪಘಾತ, 215ಮಂದಿ ಸಾವು

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ರಲ್ಲಿ 2023ರಿಂದ 2025 ರವರೆಗೆ ಒಟ್ಟು 1,674 ಅಪಘಾತಗಳು ನಡೆದಿದ್ದು, 215 ಮಂದಿ ಜೀವ ಕಳೆದುಕೊಂಡಿದ್ದಾರೆ. 311 ಮಂದಿಗೆ ತೀವ್ರ ಗಾಯಗಳಾಗಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಗ್ರಹವಾಗುತ್ತಿರುವ ಟೋಲ್ ಶುಲ್ಕ ಕುರಿತು ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

ಇದನ್ನೂ ಓದಿ:-ಮೈ-ಬೆಂ ಹೆದ್ದಾರಿ |ರೂ.855 ಕೋಟಿ ಟೋಲ್‌ ಸಂಗ್ರಹ

ಬೆಂಗಳೂರು-ನಿಡಘಟ್ಟ (ಪ್ಯಾಕೇಜ್ ೧) ನಡುವೆ 865 ಅಪಘಾತಗಳು ನಡೆದಿದ್ದು 76 ಮಂದಿ ಪ್ರಾಣ ಹಾನಿಯಾಗಿದೆ. 185 ಮಂದಿಗೆ ತೀವ್ರ ಗಾಯಗಳಾಗಿವೆ. ಹಾಗೇ, ನಿಡಘಟ್ಟ- ಮೈಸೂರು ( ಪ್ಯಾಕೇಜ್ ೨) 809 ಅಪಘಾತಗಳು ನಡೆದಿದ್ದು 139 ಮಂದಿ ಜೀವ ತೆತ್ತಿದ್ದಾರೆ. 126 ಮಂದಿಗೆ ತೀವ್ರ ಗಾಯಗಳಾಗಿವೆ. ಬೆಂಗಳೂರು-ನಿಡಘಟ್ಟ ನಡುವೆ ವರ್ಷದಿಂದ ವರ್ಷಕ್ಕೆ ಅಪಘಾತದಲ್ಲಿ ಇಳಿಕೆ ಆಗಿದ್ದು ಜೀವಹಾನಿ ಕಡಿಮೆ ಆಗಿದ್ದರೆ, ನಿಡಘಟ್ಟ-ಮೈಸೂರು ನಡುವೆ ಅಪಘಾತದಲ್ಲಿ ಹೆಚ್ಚಳವಾಗಿದ್ದು ಸಾವಿನಲ್ಲೂ ಏರಿಕೆ ಕಂಡುಬಂದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗದ ಮಿತಿಯನ್ನು ಪ್ರತಿ ಗಂಟೆಗೆ 120 ಕಿ.ಮೀ.ಗೆ ಇಳಿಸಿ, ವೇಗದ ಮೇಲೆ ನಿಗಾ ಇಡಲು ಅಲ್ಲಲ್ಲಿ ಕ್ಯಾಮೆರಾ ಅಳವಡಿಸಿ ಮಿತಿ ಮೀರಿದವರಿಂದ ದಂಡ ಸಂಗ್ರಹಿಸಲಾಗುತ್ತಿದೆ. ಆದಾಗ್ಯೂ, ಅಪಘಾತಗಳ ಸಂಖ್ಯೆಯಲ್ಲಿ ಇಳಿಮುಖ ಆಗದಿರುವುದನ್ನು ಗಮನಿಸಬಹುದಾಗಿದೆ.

ಹೆದ್ದಾರಿಯಲ್ಲಿ ವಾಹನಗಳ ಸಂಚಾರ, ಪ್ರಯಾಣಿಕರಿಗೆ ಸೌಲಭ್ಯ ಹಾಗೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಹಾಗೇ, ಸರ್ವೀಸ್ ರಸ್ತೆಗಳಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಮಧು ಜಿ.ಮಾದೇಗೌಡ ಅವರು ಸದನದ ಗಮನ ಸೆಳೆದಿದ್ದರು.

ಆಂದೋಲನ ಡೆಸ್ಕ್

Recent Posts

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

18 mins ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

29 mins ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

34 mins ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

56 mins ago

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ…

1 hour ago

ಬೆಂಗಳೂರಿನಲ್ಲಿಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಕದನ

ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌…

1 hour ago