ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ರಲ್ಲಿ 2023ರಿಂದ 2025 ರವರೆಗೆ ಒಟ್ಟು 1,674 ಅಪಘಾತಗಳು ನಡೆದಿದ್ದು, 215 ಮಂದಿ ಜೀವ ಕಳೆದುಕೊಂಡಿದ್ದಾರೆ. 311 ಮಂದಿಗೆ ತೀವ್ರ ಗಾಯಗಳಾಗಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಗ್ರಹವಾಗುತ್ತಿರುವ ಟೋಲ್ ಶುಲ್ಕ ಕುರಿತು ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
ಇದನ್ನೂ ಓದಿ:-ಮೈ-ಬೆಂ ಹೆದ್ದಾರಿ |ರೂ.855 ಕೋಟಿ ಟೋಲ್ ಸಂಗ್ರಹ
ಬೆಂಗಳೂರು-ನಿಡಘಟ್ಟ (ಪ್ಯಾಕೇಜ್ ೧) ನಡುವೆ 865 ಅಪಘಾತಗಳು ನಡೆದಿದ್ದು 76 ಮಂದಿ ಪ್ರಾಣ ಹಾನಿಯಾಗಿದೆ. 185 ಮಂದಿಗೆ ತೀವ್ರ ಗಾಯಗಳಾಗಿವೆ. ಹಾಗೇ, ನಿಡಘಟ್ಟ- ಮೈಸೂರು ( ಪ್ಯಾಕೇಜ್ ೨) 809 ಅಪಘಾತಗಳು ನಡೆದಿದ್ದು 139 ಮಂದಿ ಜೀವ ತೆತ್ತಿದ್ದಾರೆ. 126 ಮಂದಿಗೆ ತೀವ್ರ ಗಾಯಗಳಾಗಿವೆ. ಬೆಂಗಳೂರು-ನಿಡಘಟ್ಟ ನಡುವೆ ವರ್ಷದಿಂದ ವರ್ಷಕ್ಕೆ ಅಪಘಾತದಲ್ಲಿ ಇಳಿಕೆ ಆಗಿದ್ದು ಜೀವಹಾನಿ ಕಡಿಮೆ ಆಗಿದ್ದರೆ, ನಿಡಘಟ್ಟ-ಮೈಸೂರು ನಡುವೆ ಅಪಘಾತದಲ್ಲಿ ಹೆಚ್ಚಳವಾಗಿದ್ದು ಸಾವಿನಲ್ಲೂ ಏರಿಕೆ ಕಂಡುಬಂದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗದ ಮಿತಿಯನ್ನು ಪ್ರತಿ ಗಂಟೆಗೆ 120 ಕಿ.ಮೀ.ಗೆ ಇಳಿಸಿ, ವೇಗದ ಮೇಲೆ ನಿಗಾ ಇಡಲು ಅಲ್ಲಲ್ಲಿ ಕ್ಯಾಮೆರಾ ಅಳವಡಿಸಿ ಮಿತಿ ಮೀರಿದವರಿಂದ ದಂಡ ಸಂಗ್ರಹಿಸಲಾಗುತ್ತಿದೆ. ಆದಾಗ್ಯೂ, ಅಪಘಾತಗಳ ಸಂಖ್ಯೆಯಲ್ಲಿ ಇಳಿಮುಖ ಆಗದಿರುವುದನ್ನು ಗಮನಿಸಬಹುದಾಗಿದೆ.
ಹೆದ್ದಾರಿಯಲ್ಲಿ ವಾಹನಗಳ ಸಂಚಾರ, ಪ್ರಯಾಣಿಕರಿಗೆ ಸೌಲಭ್ಯ ಹಾಗೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಹಾಗೇ, ಸರ್ವೀಸ್ ರಸ್ತೆಗಳಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಮಧು ಜಿ.ಮಾದೇಗೌಡ ಅವರು ಸದನದ ಗಮನ ಸೆಳೆದಿದ್ದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…