ಮೈಸೂರು: ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು 100ದಿನದ ಅಭಿಯಾನವು ಶನಿವಾರದಿಂದ ಪ್ರಾಂರಭವಾಗಿದ್ದು, ಕ್ಷಯ ರೋಗ ಮುಕ್ತ ಜಿಲ್ಲೆ ಮಾಡಲು ಎಲ್ಲಾ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಗಾಯತ್ರಿ ಹೇಳಿದರು.
ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ‘ಆರೋಗ್ಯದ ಬಗ್ಗೆ ಇರಲಿ ಗಮನ ಟಿ ಬಿ ಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷಯ ರೋಗಿಗಳನ್ನು ಪತ್ತೆ ಹಚ್ಚುವ ಕೆಲಸ ಚುರುಕಾಗಬೇಕು. ಇದು ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆ ಆಗಿರುವುದರಿಂದ ಇದಕ್ಕೆ ಚಿಕಿತ್ಸೆ ನೀಡಿ ಹರಡದಂತೆ ನೋಡಿಕೊಳ್ಳಬೇಕು. ಮೂರು ನಾಲ್ಕು ವಾರಗಳಿಗೂ ಹೆಚ್ಚು ಕೆಮ್ಮು ಇದ್ದರೆ ಅದು ಕ್ಷಯ ಆಗಿರಬಹುದು ಆದ್ದರಿಂದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು
ಕ್ಷಯ ರೋಗಕ್ಕೆ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುವುದು. ಗ್ರಾಮಿಣ ಪದೇಶದಲ್ಲಿ ಹೆಚ್ಚಿನ ಪರೀಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು ಹೆಚ್ಚಿನ ರೀತಿ ಕಾರ್ಯ ನಿರ್ವಹಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಇದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ನಿಕ್ಷಯ ಪೋರ್ಟಲ್ ನಲ್ಲಿ ಕ್ಷಯ ರೋಗಿಗಳನ್ನು ಅಡಾಪ್ಟ್ ಮಾಡಿಕೊಳ್ಳಲು ಅವಕಾಶ ಇದೆ. ಈ ರೋಗಿಗಳ ಔಷಧಿಗಳನ್ನು ನೀಡಲು ಕಡಿಮೆ ಮೊತ್ತದ ಹಣವನ್ನು ಒದಗಿಸಬಹುದು ಯಾರು ಬೇಕಾದರೂ ಅಡಾಪ್ಟ್ ಮಾಡಿಕೊಳ್ಳಬಹುದು ಎಂದರು.
ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ ಮಾತನಾಡಿ, ಕ್ಷಯ ರೋಗ ಅಂಟು ರೋಗ. ಇಂತಹ ರೋಗಕ್ಕೆ ಚಿಕಿತ್ಸೆ ನೀಡುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಶ್ರಮವಹಿಸುತ್ತಿದ್ದಾರೆ. ಸಾರ್ವಜನಿಕರು ಹೆಚ್ಚಿನ ಚಿಕಿತ್ಸೆಗೆ ಒಳಗಾಗಬೇಕು ಎಂದರು. ವೈದ್ಯರು ಹಾಗೂ ಸೈನಿಕರು ತಮ್ಮ ಪ್ರಾಣವನ್ನು ಪಣಕ್ಕೆ ಇಟ್ಟು ತಮ್ಮ ವೃತ್ತಿಯನ್ನು ಮಾಡುತ್ತಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪಿ ಸಿ ಕುಮಾರಸ್ವಾಮಿ ಮಾತನಾಡಿ, ಇಂದಿನಿಂದ 100 ದಿನಗಳ ಕಾಲ ಟಿ ಬಿ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದೆ. 2005-06 ರಿಂದ ಆರ್ ಎಂ ಪಿ ಟಿ ಸಿ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಟಿ ಬಿ ಯನ್ನು ಕಡಿಮೆ ಮಾಡುವುದು ಆಗಿದೆ. 1 ಲಕ್ಷ ಜನರಿಗೆ 50 ಕ್ಕಿಂತ ಕಡಿಮೆ ಜನರಿಗೆ ಟಿ ಬಿ ಇರುವಂತೆ ಮಾಡುವುದು ನಮ್ಮ ಗುರಿ ಆಗಿದೆ. ಮುಂದಿನ 100 ದಿನಗಳ ಕಾಲ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಟಿ ಬಿ ಯನ್ನು ಕಡಿಮೆ ಮಾಡಲು ಗ್ರಾಮಗಳಿಗೆ ಭೇಟಿ ನೀಡಿ ಸರ್ವೇ ಮಾಡಲಾಗುವುದು. ಯಾವ ಗ್ರಾಮಗಳಲ್ಲಿ ಯಾವ ಏರಿಯಾಗಳಲ್ಲಿ ಕ್ಷಯ ರೋಗ ಇದೆ ಎಂಬುದನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಸಕ್ಕರೆ ಕಾಯಿಲೆ ಹಾಗೂ ಏಡ್ಸ್, ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವವರಿಗೆ ಹೆಚ್ಚಾಗಿ ಕ್ಷಯ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಇಂತವರ ಹೆಚ್ಚಿನ ನಿಗಾ ವಹಿಸಲಾಗುವುದು ಸೂಕ್ತ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಜಯಂತ್ ಎಂ ಎಸ್, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಬೃಂದಾ, ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…
ಮೈಸೂರು : ನಾನು ಅಹಿಂದ ಚಾಂಪಿಯನ್ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…
ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…