ಮೈಸೂರು: ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು 100ದಿನದ ಅಭಿಯಾನವು ಶನಿವಾರದಿಂದ ಪ್ರಾಂರಭವಾಗಿದ್ದು, ಕ್ಷಯ ರೋಗ ಮುಕ್ತ ಜಿಲ್ಲೆ ಮಾಡಲು ಎಲ್ಲಾ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಗಾಯತ್ರಿ ಹೇಳಿದರು.
ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ‘ಆರೋಗ್ಯದ ಬಗ್ಗೆ ಇರಲಿ ಗಮನ ಟಿ ಬಿ ಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷಯ ರೋಗಿಗಳನ್ನು ಪತ್ತೆ ಹಚ್ಚುವ ಕೆಲಸ ಚುರುಕಾಗಬೇಕು. ಇದು ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆ ಆಗಿರುವುದರಿಂದ ಇದಕ್ಕೆ ಚಿಕಿತ್ಸೆ ನೀಡಿ ಹರಡದಂತೆ ನೋಡಿಕೊಳ್ಳಬೇಕು. ಮೂರು ನಾಲ್ಕು ವಾರಗಳಿಗೂ ಹೆಚ್ಚು ಕೆಮ್ಮು ಇದ್ದರೆ ಅದು ಕ್ಷಯ ಆಗಿರಬಹುದು ಆದ್ದರಿಂದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು
ಕ್ಷಯ ರೋಗಕ್ಕೆ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುವುದು. ಗ್ರಾಮಿಣ ಪದೇಶದಲ್ಲಿ ಹೆಚ್ಚಿನ ಪರೀಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು ಹೆಚ್ಚಿನ ರೀತಿ ಕಾರ್ಯ ನಿರ್ವಹಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಇದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ನಿಕ್ಷಯ ಪೋರ್ಟಲ್ ನಲ್ಲಿ ಕ್ಷಯ ರೋಗಿಗಳನ್ನು ಅಡಾಪ್ಟ್ ಮಾಡಿಕೊಳ್ಳಲು ಅವಕಾಶ ಇದೆ. ಈ ರೋಗಿಗಳ ಔಷಧಿಗಳನ್ನು ನೀಡಲು ಕಡಿಮೆ ಮೊತ್ತದ ಹಣವನ್ನು ಒದಗಿಸಬಹುದು ಯಾರು ಬೇಕಾದರೂ ಅಡಾಪ್ಟ್ ಮಾಡಿಕೊಳ್ಳಬಹುದು ಎಂದರು.
ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ ಮಾತನಾಡಿ, ಕ್ಷಯ ರೋಗ ಅಂಟು ರೋಗ. ಇಂತಹ ರೋಗಕ್ಕೆ ಚಿಕಿತ್ಸೆ ನೀಡುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಶ್ರಮವಹಿಸುತ್ತಿದ್ದಾರೆ. ಸಾರ್ವಜನಿಕರು ಹೆಚ್ಚಿನ ಚಿಕಿತ್ಸೆಗೆ ಒಳಗಾಗಬೇಕು ಎಂದರು. ವೈದ್ಯರು ಹಾಗೂ ಸೈನಿಕರು ತಮ್ಮ ಪ್ರಾಣವನ್ನು ಪಣಕ್ಕೆ ಇಟ್ಟು ತಮ್ಮ ವೃತ್ತಿಯನ್ನು ಮಾಡುತ್ತಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪಿ ಸಿ ಕುಮಾರಸ್ವಾಮಿ ಮಾತನಾಡಿ, ಇಂದಿನಿಂದ 100 ದಿನಗಳ ಕಾಲ ಟಿ ಬಿ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದೆ. 2005-06 ರಿಂದ ಆರ್ ಎಂ ಪಿ ಟಿ ಸಿ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಟಿ ಬಿ ಯನ್ನು ಕಡಿಮೆ ಮಾಡುವುದು ಆಗಿದೆ. 1 ಲಕ್ಷ ಜನರಿಗೆ 50 ಕ್ಕಿಂತ ಕಡಿಮೆ ಜನರಿಗೆ ಟಿ ಬಿ ಇರುವಂತೆ ಮಾಡುವುದು ನಮ್ಮ ಗುರಿ ಆಗಿದೆ. ಮುಂದಿನ 100 ದಿನಗಳ ಕಾಲ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಟಿ ಬಿ ಯನ್ನು ಕಡಿಮೆ ಮಾಡಲು ಗ್ರಾಮಗಳಿಗೆ ಭೇಟಿ ನೀಡಿ ಸರ್ವೇ ಮಾಡಲಾಗುವುದು. ಯಾವ ಗ್ರಾಮಗಳಲ್ಲಿ ಯಾವ ಏರಿಯಾಗಳಲ್ಲಿ ಕ್ಷಯ ರೋಗ ಇದೆ ಎಂಬುದನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಸಕ್ಕರೆ ಕಾಯಿಲೆ ಹಾಗೂ ಏಡ್ಸ್, ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವವರಿಗೆ ಹೆಚ್ಚಾಗಿ ಕ್ಷಯ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಇಂತವರ ಹೆಚ್ಚಿನ ನಿಗಾ ವಹಿಸಲಾಗುವುದು ಸೂಕ್ತ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಜಯಂತ್ ಎಂ ಎಸ್, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಬೃಂದಾ, ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ…
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ…
ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ…
ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…
ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…
ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…