ಮೈಸೂರು

ಮೈಸೂರು: ಕ್ಷಯ ರೋಗ ನಿರ್ಮೂಲನೆಗೆ 100 ದಿನದ ಅಭಿಯಾನ ಆರಂಭ

ಮೈಸೂರು: ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು 100ದಿನದ ಅಭಿಯಾನವು ಶನಿವಾರದಿಂದ ಪ್ರಾಂರಭವಾಗಿದ್ದು, ಕ್ಷಯ ರೋಗ ಮುಕ್ತ ಜಿಲ್ಲೆ ಮಾಡಲು ಎಲ್ಲಾ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಗಾಯತ್ರಿ ಹೇಳಿದರು.

ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ‘ಆರೋಗ್ಯದ ಬಗ್ಗೆ ಇರಲಿ ಗಮನ ಟಿ ಬಿ ಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷಯ ರೋಗಿಗಳನ್ನು ಪತ್ತೆ ಹಚ್ಚುವ ಕೆಲಸ ಚುರುಕಾಗಬೇಕು. ಇದು ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆ ಆಗಿರುವುದರಿಂದ ಇದಕ್ಕೆ ಚಿಕಿತ್ಸೆ ನೀಡಿ ಹರಡದಂತೆ ನೋಡಿಕೊಳ್ಳಬೇಕು. ಮೂರು ನಾಲ್ಕು ವಾರಗಳಿಗೂ ಹೆಚ್ಚು ಕೆಮ್ಮು ಇದ್ದರೆ ಅದು ಕ್ಷಯ ಆಗಿರಬಹುದು ಆದ್ದರಿಂದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು

ಕ್ಷಯ ರೋಗಕ್ಕೆ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುವುದು. ಗ್ರಾಮಿಣ ಪದೇಶದಲ್ಲಿ ಹೆಚ್ಚಿನ ಪರೀಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು ಹೆಚ್ಚಿನ ರೀತಿ ಕಾರ್ಯ ನಿರ್ವಹಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಇದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ನಿಕ್ಷಯ ಪೋರ್ಟಲ್ ನಲ್ಲಿ ಕ್ಷಯ ರೋಗಿಗಳನ್ನು ಅಡಾಪ್ಟ್ ಮಾಡಿಕೊಳ್ಳಲು ಅವಕಾಶ ಇದೆ. ಈ ರೋಗಿಗಳ ಔಷಧಿಗಳನ್ನು ನೀಡಲು ಕಡಿಮೆ ಮೊತ್ತದ ಹಣವನ್ನು ಒದಗಿಸಬಹುದು ಯಾರು ಬೇಕಾದರೂ ಅಡಾಪ್ಟ್ ಮಾಡಿಕೊಳ್ಳಬಹುದು ಎಂದರು.

ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ ಮಾತನಾಡಿ, ಕ್ಷಯ ರೋಗ ಅಂಟು ರೋಗ. ಇಂತಹ ರೋಗಕ್ಕೆ ಚಿಕಿತ್ಸೆ ನೀಡುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಶ್ರಮವಹಿಸುತ್ತಿದ್ದಾರೆ. ಸಾರ್ವಜನಿಕರು ಹೆಚ್ಚಿನ ಚಿಕಿತ್ಸೆಗೆ ಒಳಗಾಗಬೇಕು ಎಂದರು. ವೈದ್ಯರು ಹಾಗೂ ಸೈನಿಕರು ತಮ್ಮ ಪ್ರಾಣವನ್ನು ಪಣಕ್ಕೆ ಇಟ್ಟು ತಮ್ಮ ವೃತ್ತಿಯನ್ನು ಮಾಡುತ್ತಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪಿ ಸಿ ಕುಮಾರಸ್ವಾಮಿ ಮಾತನಾಡಿ, ಇಂದಿನಿಂದ 100 ದಿನಗಳ ಕಾಲ ಟಿ ಬಿ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದೆ. 2005-06 ರಿಂದ ಆರ್ ಎಂ ಪಿ ಟಿ ಸಿ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಟಿ ಬಿ ಯನ್ನು ಕಡಿಮೆ ಮಾಡುವುದು ಆಗಿದೆ. 1 ಲಕ್ಷ ಜನರಿಗೆ 50 ಕ್ಕಿಂತ ಕಡಿಮೆ ಜನರಿಗೆ ಟಿ ಬಿ ಇರುವಂತೆ ಮಾಡುವುದು ನಮ್ಮ ಗುರಿ ಆಗಿದೆ. ಮುಂದಿನ 100 ದಿನಗಳ ಕಾಲ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಟಿ ಬಿ ಯನ್ನು ಕಡಿಮೆ ಮಾಡಲು ಗ್ರಾಮಗಳಿಗೆ ಭೇಟಿ ನೀಡಿ ಸರ್ವೇ ಮಾಡಲಾಗುವುದು. ಯಾವ ಗ್ರಾಮಗಳಲ್ಲಿ ಯಾವ ಏರಿಯಾಗಳಲ್ಲಿ ಕ್ಷಯ ರೋಗ ಇದೆ ಎಂಬುದನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

ಸಕ್ಕರೆ ಕಾಯಿಲೆ ಹಾಗೂ ಏಡ್ಸ್‌, ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವವರಿಗೆ ಹೆಚ್ಚಾಗಿ ಕ್ಷಯ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಇಂತವರ ಹೆಚ್ಚಿನ ನಿಗಾ ವಹಿಸಲಾಗುವುದು ಸೂಕ್ತ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಜಯಂತ್ ಎಂ ಎಸ್, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಬೃಂದಾ, ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

9 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

9 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

10 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

11 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

11 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

14 hours ago