ಮೈಸೂರು

ಮೈಸೂರು: 111 ಅಡಿ ಬೃಹತ್‌ ಗಂಧದಕಡ್ಡಿ ಬೆಳಗಿಸಿ ದಾಖಲೆ

ಮೈಸೂರು: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಪ್ರತಿಷ್ಠಿತ ಕಂಪನಿಯಾದ ಸೈಕಲ್‌ ಪ್ಯೂರ್‌ ಅಗರಬತ್ತಿ ಸಂಸ್ಥೆ ವತಿಯಿಂದ ಇಂದು ಮೈಸೂರಿನಲ್ಲಿ 111 ಅಡಿ ಉದ್ದದ ವಿಶೇಷವಾದ ಬೃಹತ್ ಗಂಧದಕಡ್ಡಿಯನ್ನು ಹಚ್ಚುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಅರಮನೆ ಅಂಗಳದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಶ್ರೀರಾಮನ ಮೂರ್ತಿಯನ್ನ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ತಾಯಿ ಸರಸ್ವತಿ, ಪತ್ನಿ ವಿಜೇತ ಸಂಸದ ಪ್ರತಾಪ್‌ ಸಿಂಹ ಕೆ.ಆರ್.ಕ್ಷೇತ್ರದ ಶಾಸಕ ಶ್ರೀವತ್ಸ ಸೈಕಲ್‌ ಅಗರಬತ್ತಿ ಸಂಸ್ಥೆಯ ಮುಖ್ಯಸ್ಥ ಆರ್.ಗುರು ಅವರುಗಳು ಬೃಹತ್‌ ಗಂಧದಕಡ್ಡಿಯನ್ನ ಬೆಳಗಿಸಿದರು.

ಇನ್ನು 111 ಉದ್ದದ ಗಂಧದಕಡ್ಡಿ ಬೆಳಗಿಸುವ ಈ ಕಾರ್ಯಕ್ರಮಕ್ಕೆ ನೂರಾರು ಸಂಖ್ಯೆಯಲ್ಲಿ ರಾಮ ಭಕ್ತರು ಆಗಮಿಸಿ ದಾಖಲೆಯ ಸನ್ನಿವೇಶಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ರಾಮ ಲಕ್ಷ್ಮಣ ಸೀತಾಮಾತೆಯ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದಲ್ಲದೇ ಅಯೋಧ್ಯೆಯ ರಾಮಮಂದಿರದ ಮಾದರಿಯನ್ನು ಪ್ರದರ್ಶನಕ್ಕಿಡಲಾಗಿತ್ತು. ಇದೇ ವೇಳೆ ಪುಟ್ಟ ಮಗುವೊಂದು ಬಾಲ ರಾಮನ ವೇಷ ಧರಿಸಿ ನೆರೆದಿದ್ದವರ ಗಮನ ಸೆಳೆಯಿತು. ಇದರೊಂದಿಗೆ ರಾಮಭಕ್ತರು ನಾ ಮುಂದು ತಾ ಮುಂದು ಎಂದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹಾಗೂ ಫೋಟೊ ತೆಗೆಸಿಕೊಳ್ಳಲು ಮುಗಿ ಬೀಳುತ್ತಿದ್ದ ದೃಶ್ಯಗಳು ಕಂಡಿಬಂದವು.

ಶ್ರೀರಾಮನಿಗೆ 108 ರೀತಿಯ ಸಿಹಿ ತಿನಿಸುಗಳ ಅರ್ಪಣೆ

ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಮೈಸೂರಿನ ಇರ್ವಿನ್‌ ರಸ್ತೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಈ ವೇಳೆ ದೇವಸ್ಥಾನದ ಆವರಣದಲ್ಲಿ ವಿಷ್ಣುಸಮಾಜದ ನೂರಾರು ರಾಮ ಭಕ್ತರು ಸೇರಿ ರಾಮನ ಭಜನೆ ಮಾಡಿದರು. ಭಕ್ತರಿಗೆ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.

ಇನ್ನು ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ವಿಷ್ಣು ಸಮಾಜದ ವತಿಯಿಂದ 108 ತರಹದ ಸಿಹಿ ತಿಂಡಿ ತಿನಿಸುಗಳನ್ನು ತಯಾರಿಸಿ ಶ್ರೀ ರಾಮನಿಗೆ ಅರ್ಪಿಸಿದರು.

ಈ ವಿಶೇಷ ದಿನದ ಅಂಗವಾಗಿ ವಿಷ್ಣು ಸಮಾಜದ ರಾಮಭಕ್ತರು ತಮ್ಮ ಅಂಗಡಿ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಆಗಮಿಸಿದ್ರು.
ಇನ್ನು ದೀರ್ಘ ಕಾಲದ ಕನಸು ನನಸಾದ ದಿನದ ಸಂತಸದಲ್ಲಿ ಯುವಕರು ಜೈ ಶ್ರೀರಾಮ್‌ ಘೋಷಣೆಗಳನ್ನ ಕೂಗಿ ಕುಣಿದು ಕುಪ್ಪಳಿಸಿದರು.

andolanait

Recent Posts

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

12 mins ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

29 mins ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

37 mins ago

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌ ಸ್ಪಷ್ಟನೆ

ವಾಷಿಂಗ್ಟನ್:‌ ಇರಾನ್‌ ಜೊತೆ ಕದನ ವಿರಾಮ್‌ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…

1 hour ago

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

2 hours ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

2 hours ago