ಮೈಸೂರು

ಮೈಸೂರು: 111 ಅಡಿ ಬೃಹತ್‌ ಗಂಧದಕಡ್ಡಿ ಬೆಳಗಿಸಿ ದಾಖಲೆ

ಮೈಸೂರು: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಪ್ರತಿಷ್ಠಿತ ಕಂಪನಿಯಾದ ಸೈಕಲ್‌ ಪ್ಯೂರ್‌ ಅಗರಬತ್ತಿ ಸಂಸ್ಥೆ ವತಿಯಿಂದ ಇಂದು ಮೈಸೂರಿನಲ್ಲಿ 111 ಅಡಿ ಉದ್ದದ ವಿಶೇಷವಾದ ಬೃಹತ್ ಗಂಧದಕಡ್ಡಿಯನ್ನು ಹಚ್ಚುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಅರಮನೆ ಅಂಗಳದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಶ್ರೀರಾಮನ ಮೂರ್ತಿಯನ್ನ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ತಾಯಿ ಸರಸ್ವತಿ, ಪತ್ನಿ ವಿಜೇತ ಸಂಸದ ಪ್ರತಾಪ್‌ ಸಿಂಹ ಕೆ.ಆರ್.ಕ್ಷೇತ್ರದ ಶಾಸಕ ಶ್ರೀವತ್ಸ ಸೈಕಲ್‌ ಅಗರಬತ್ತಿ ಸಂಸ್ಥೆಯ ಮುಖ್ಯಸ್ಥ ಆರ್.ಗುರು ಅವರುಗಳು ಬೃಹತ್‌ ಗಂಧದಕಡ್ಡಿಯನ್ನ ಬೆಳಗಿಸಿದರು.

ಇನ್ನು 111 ಉದ್ದದ ಗಂಧದಕಡ್ಡಿ ಬೆಳಗಿಸುವ ಈ ಕಾರ್ಯಕ್ರಮಕ್ಕೆ ನೂರಾರು ಸಂಖ್ಯೆಯಲ್ಲಿ ರಾಮ ಭಕ್ತರು ಆಗಮಿಸಿ ದಾಖಲೆಯ ಸನ್ನಿವೇಶಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ರಾಮ ಲಕ್ಷ್ಮಣ ಸೀತಾಮಾತೆಯ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದಲ್ಲದೇ ಅಯೋಧ್ಯೆಯ ರಾಮಮಂದಿರದ ಮಾದರಿಯನ್ನು ಪ್ರದರ್ಶನಕ್ಕಿಡಲಾಗಿತ್ತು. ಇದೇ ವೇಳೆ ಪುಟ್ಟ ಮಗುವೊಂದು ಬಾಲ ರಾಮನ ವೇಷ ಧರಿಸಿ ನೆರೆದಿದ್ದವರ ಗಮನ ಸೆಳೆಯಿತು. ಇದರೊಂದಿಗೆ ರಾಮಭಕ್ತರು ನಾ ಮುಂದು ತಾ ಮುಂದು ಎಂದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹಾಗೂ ಫೋಟೊ ತೆಗೆಸಿಕೊಳ್ಳಲು ಮುಗಿ ಬೀಳುತ್ತಿದ್ದ ದೃಶ್ಯಗಳು ಕಂಡಿಬಂದವು.

ಶ್ರೀರಾಮನಿಗೆ 108 ರೀತಿಯ ಸಿಹಿ ತಿನಿಸುಗಳ ಅರ್ಪಣೆ

ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಮೈಸೂರಿನ ಇರ್ವಿನ್‌ ರಸ್ತೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಈ ವೇಳೆ ದೇವಸ್ಥಾನದ ಆವರಣದಲ್ಲಿ ವಿಷ್ಣುಸಮಾಜದ ನೂರಾರು ರಾಮ ಭಕ್ತರು ಸೇರಿ ರಾಮನ ಭಜನೆ ಮಾಡಿದರು. ಭಕ್ತರಿಗೆ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.

ಇನ್ನು ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ವಿಷ್ಣು ಸಮಾಜದ ವತಿಯಿಂದ 108 ತರಹದ ಸಿಹಿ ತಿಂಡಿ ತಿನಿಸುಗಳನ್ನು ತಯಾರಿಸಿ ಶ್ರೀ ರಾಮನಿಗೆ ಅರ್ಪಿಸಿದರು.

ಈ ವಿಶೇಷ ದಿನದ ಅಂಗವಾಗಿ ವಿಷ್ಣು ಸಮಾಜದ ರಾಮಭಕ್ತರು ತಮ್ಮ ಅಂಗಡಿ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಆಗಮಿಸಿದ್ರು.
ಇನ್ನು ದೀರ್ಘ ಕಾಲದ ಕನಸು ನನಸಾದ ದಿನದ ಸಂತಸದಲ್ಲಿ ಯುವಕರು ಜೈ ಶ್ರೀರಾಮ್‌ ಘೋಷಣೆಗಳನ್ನ ಕೂಗಿ ಕುಣಿದು ಕುಪ್ಪಳಿಸಿದರು.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

24 mins ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

3 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

3 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

3 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

4 hours ago