ಮೈಸೂರು

ಮೈಸೂರು: 111 ಅಡಿ ಬೃಹತ್‌ ಗಂಧದಕಡ್ಡಿ ಬೆಳಗಿಸಿ ದಾಖಲೆ

ಮೈಸೂರು: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಪ್ರತಿಷ್ಠಿತ ಕಂಪನಿಯಾದ ಸೈಕಲ್‌ ಪ್ಯೂರ್‌ ಅಗರಬತ್ತಿ ಸಂಸ್ಥೆ ವತಿಯಿಂದ ಇಂದು ಮೈಸೂರಿನಲ್ಲಿ 111 ಅಡಿ ಉದ್ದದ ವಿಶೇಷವಾದ ಬೃಹತ್ ಗಂಧದಕಡ್ಡಿಯನ್ನು ಹಚ್ಚುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಅರಮನೆ ಅಂಗಳದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಶ್ರೀರಾಮನ ಮೂರ್ತಿಯನ್ನ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ತಾಯಿ ಸರಸ್ವತಿ, ಪತ್ನಿ ವಿಜೇತ ಸಂಸದ ಪ್ರತಾಪ್‌ ಸಿಂಹ ಕೆ.ಆರ್.ಕ್ಷೇತ್ರದ ಶಾಸಕ ಶ್ರೀವತ್ಸ ಸೈಕಲ್‌ ಅಗರಬತ್ತಿ ಸಂಸ್ಥೆಯ ಮುಖ್ಯಸ್ಥ ಆರ್.ಗುರು ಅವರುಗಳು ಬೃಹತ್‌ ಗಂಧದಕಡ್ಡಿಯನ್ನ ಬೆಳಗಿಸಿದರು.

ಇನ್ನು 111 ಉದ್ದದ ಗಂಧದಕಡ್ಡಿ ಬೆಳಗಿಸುವ ಈ ಕಾರ್ಯಕ್ರಮಕ್ಕೆ ನೂರಾರು ಸಂಖ್ಯೆಯಲ್ಲಿ ರಾಮ ಭಕ್ತರು ಆಗಮಿಸಿ ದಾಖಲೆಯ ಸನ್ನಿವೇಶಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ರಾಮ ಲಕ್ಷ್ಮಣ ಸೀತಾಮಾತೆಯ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದಲ್ಲದೇ ಅಯೋಧ್ಯೆಯ ರಾಮಮಂದಿರದ ಮಾದರಿಯನ್ನು ಪ್ರದರ್ಶನಕ್ಕಿಡಲಾಗಿತ್ತು. ಇದೇ ವೇಳೆ ಪುಟ್ಟ ಮಗುವೊಂದು ಬಾಲ ರಾಮನ ವೇಷ ಧರಿಸಿ ನೆರೆದಿದ್ದವರ ಗಮನ ಸೆಳೆಯಿತು. ಇದರೊಂದಿಗೆ ರಾಮಭಕ್ತರು ನಾ ಮುಂದು ತಾ ಮುಂದು ಎಂದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹಾಗೂ ಫೋಟೊ ತೆಗೆಸಿಕೊಳ್ಳಲು ಮುಗಿ ಬೀಳುತ್ತಿದ್ದ ದೃಶ್ಯಗಳು ಕಂಡಿಬಂದವು.

ಶ್ರೀರಾಮನಿಗೆ 108 ರೀತಿಯ ಸಿಹಿ ತಿನಿಸುಗಳ ಅರ್ಪಣೆ

ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಮೈಸೂರಿನ ಇರ್ವಿನ್‌ ರಸ್ತೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಈ ವೇಳೆ ದೇವಸ್ಥಾನದ ಆವರಣದಲ್ಲಿ ವಿಷ್ಣುಸಮಾಜದ ನೂರಾರು ರಾಮ ಭಕ್ತರು ಸೇರಿ ರಾಮನ ಭಜನೆ ಮಾಡಿದರು. ಭಕ್ತರಿಗೆ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.

ಇನ್ನು ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ವಿಷ್ಣು ಸಮಾಜದ ವತಿಯಿಂದ 108 ತರಹದ ಸಿಹಿ ತಿಂಡಿ ತಿನಿಸುಗಳನ್ನು ತಯಾರಿಸಿ ಶ್ರೀ ರಾಮನಿಗೆ ಅರ್ಪಿಸಿದರು.

ಈ ವಿಶೇಷ ದಿನದ ಅಂಗವಾಗಿ ವಿಷ್ಣು ಸಮಾಜದ ರಾಮಭಕ್ತರು ತಮ್ಮ ಅಂಗಡಿ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಆಗಮಿಸಿದ್ರು.
ಇನ್ನು ದೀರ್ಘ ಕಾಲದ ಕನಸು ನನಸಾದ ದಿನದ ಸಂತಸದಲ್ಲಿ ಯುವಕರು ಜೈ ಶ್ರೀರಾಮ್‌ ಘೋಷಣೆಗಳನ್ನ ಕೂಗಿ ಕುಣಿದು ಕುಪ್ಪಳಿಸಿದರು.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

8 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

9 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

10 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

11 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

12 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

13 hours ago