ಮೈಸೂರು

ಮೈಸೂರು: 111 ಅಡಿ ಬೃಹತ್‌ ಗಂಧದಕಡ್ಡಿ ಬೆಳಗಿಸಿ ದಾಖಲೆ

ಮೈಸೂರು: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಪ್ರತಿಷ್ಠಿತ ಕಂಪನಿಯಾದ ಸೈಕಲ್‌ ಪ್ಯೂರ್‌ ಅಗರಬತ್ತಿ ಸಂಸ್ಥೆ ವತಿಯಿಂದ ಇಂದು ಮೈಸೂರಿನಲ್ಲಿ 111 ಅಡಿ ಉದ್ದದ ವಿಶೇಷವಾದ ಬೃಹತ್ ಗಂಧದಕಡ್ಡಿಯನ್ನು ಹಚ್ಚುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಅರಮನೆ ಅಂಗಳದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಶ್ರೀರಾಮನ ಮೂರ್ತಿಯನ್ನ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ತಾಯಿ ಸರಸ್ವತಿ, ಪತ್ನಿ ವಿಜೇತ ಸಂಸದ ಪ್ರತಾಪ್‌ ಸಿಂಹ ಕೆ.ಆರ್.ಕ್ಷೇತ್ರದ ಶಾಸಕ ಶ್ರೀವತ್ಸ ಸೈಕಲ್‌ ಅಗರಬತ್ತಿ ಸಂಸ್ಥೆಯ ಮುಖ್ಯಸ್ಥ ಆರ್.ಗುರು ಅವರುಗಳು ಬೃಹತ್‌ ಗಂಧದಕಡ್ಡಿಯನ್ನ ಬೆಳಗಿಸಿದರು.

ಇನ್ನು 111 ಉದ್ದದ ಗಂಧದಕಡ್ಡಿ ಬೆಳಗಿಸುವ ಈ ಕಾರ್ಯಕ್ರಮಕ್ಕೆ ನೂರಾರು ಸಂಖ್ಯೆಯಲ್ಲಿ ರಾಮ ಭಕ್ತರು ಆಗಮಿಸಿ ದಾಖಲೆಯ ಸನ್ನಿವೇಶಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ರಾಮ ಲಕ್ಷ್ಮಣ ಸೀತಾಮಾತೆಯ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದಲ್ಲದೇ ಅಯೋಧ್ಯೆಯ ರಾಮಮಂದಿರದ ಮಾದರಿಯನ್ನು ಪ್ರದರ್ಶನಕ್ಕಿಡಲಾಗಿತ್ತು. ಇದೇ ವೇಳೆ ಪುಟ್ಟ ಮಗುವೊಂದು ಬಾಲ ರಾಮನ ವೇಷ ಧರಿಸಿ ನೆರೆದಿದ್ದವರ ಗಮನ ಸೆಳೆಯಿತು. ಇದರೊಂದಿಗೆ ರಾಮಭಕ್ತರು ನಾ ಮುಂದು ತಾ ಮುಂದು ಎಂದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹಾಗೂ ಫೋಟೊ ತೆಗೆಸಿಕೊಳ್ಳಲು ಮುಗಿ ಬೀಳುತ್ತಿದ್ದ ದೃಶ್ಯಗಳು ಕಂಡಿಬಂದವು.

ಶ್ರೀರಾಮನಿಗೆ 108 ರೀತಿಯ ಸಿಹಿ ತಿನಿಸುಗಳ ಅರ್ಪಣೆ

ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಮೈಸೂರಿನ ಇರ್ವಿನ್‌ ರಸ್ತೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಈ ವೇಳೆ ದೇವಸ್ಥಾನದ ಆವರಣದಲ್ಲಿ ವಿಷ್ಣುಸಮಾಜದ ನೂರಾರು ರಾಮ ಭಕ್ತರು ಸೇರಿ ರಾಮನ ಭಜನೆ ಮಾಡಿದರು. ಭಕ್ತರಿಗೆ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.

ಇನ್ನು ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ವಿಷ್ಣು ಸಮಾಜದ ವತಿಯಿಂದ 108 ತರಹದ ಸಿಹಿ ತಿಂಡಿ ತಿನಿಸುಗಳನ್ನು ತಯಾರಿಸಿ ಶ್ರೀ ರಾಮನಿಗೆ ಅರ್ಪಿಸಿದರು.

ಈ ವಿಶೇಷ ದಿನದ ಅಂಗವಾಗಿ ವಿಷ್ಣು ಸಮಾಜದ ರಾಮಭಕ್ತರು ತಮ್ಮ ಅಂಗಡಿ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಆಗಮಿಸಿದ್ರು.
ಇನ್ನು ದೀರ್ಘ ಕಾಲದ ಕನಸು ನನಸಾದ ದಿನದ ಸಂತಸದಲ್ಲಿ ಯುವಕರು ಜೈ ಶ್ರೀರಾಮ್‌ ಘೋಷಣೆಗಳನ್ನ ಕೂಗಿ ಕುಣಿದು ಕುಪ್ಪಳಿಸಿದರು.

andolanait

Recent Posts

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

6 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

7 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

7 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

7 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

9 hours ago

ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…

9 hours ago