ಮೈಸೂರು: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಪ್ರತಿಷ್ಠಿತ ಕಂಪನಿಯಾದ ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆ ವತಿಯಿಂದ ಇಂದು ಮೈಸೂರಿನಲ್ಲಿ 111 ಅಡಿ ಉದ್ದದ ವಿಶೇಷವಾದ ಬೃಹತ್ ಗಂಧದಕಡ್ಡಿಯನ್ನು ಹಚ್ಚುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಅರಮನೆ ಅಂಗಳದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಶ್ರೀರಾಮನ ಮೂರ್ತಿಯನ್ನ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರ ತಾಯಿ ಸರಸ್ವತಿ, ಪತ್ನಿ ವಿಜೇತ ಸಂಸದ ಪ್ರತಾಪ್ ಸಿಂಹ ಕೆ.ಆರ್.ಕ್ಷೇತ್ರದ ಶಾಸಕ ಶ್ರೀವತ್ಸ ಸೈಕಲ್ ಅಗರಬತ್ತಿ ಸಂಸ್ಥೆಯ ಮುಖ್ಯಸ್ಥ ಆರ್.ಗುರು ಅವರುಗಳು ಬೃಹತ್ ಗಂಧದಕಡ್ಡಿಯನ್ನ ಬೆಳಗಿಸಿದರು.
ಇನ್ನು 111 ಉದ್ದದ ಗಂಧದಕಡ್ಡಿ ಬೆಳಗಿಸುವ ಈ ಕಾರ್ಯಕ್ರಮಕ್ಕೆ ನೂರಾರು ಸಂಖ್ಯೆಯಲ್ಲಿ ರಾಮ ಭಕ್ತರು ಆಗಮಿಸಿ ದಾಖಲೆಯ ಸನ್ನಿವೇಶಕ್ಕೆ ಸಾಕ್ಷಿಯಾದರು.
ಈ ಸಂದರ್ಭದಲ್ಲಿ ರಾಮ ಲಕ್ಷ್ಮಣ ಸೀತಾಮಾತೆಯ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದಲ್ಲದೇ ಅಯೋಧ್ಯೆಯ ರಾಮಮಂದಿರದ ಮಾದರಿಯನ್ನು ಪ್ರದರ್ಶನಕ್ಕಿಡಲಾಗಿತ್ತು. ಇದೇ ವೇಳೆ ಪುಟ್ಟ ಮಗುವೊಂದು ಬಾಲ ರಾಮನ ವೇಷ ಧರಿಸಿ ನೆರೆದಿದ್ದವರ ಗಮನ ಸೆಳೆಯಿತು. ಇದರೊಂದಿಗೆ ರಾಮಭಕ್ತರು ನಾ ಮುಂದು ತಾ ಮುಂದು ಎಂದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹಾಗೂ ಫೋಟೊ ತೆಗೆಸಿಕೊಳ್ಳಲು ಮುಗಿ ಬೀಳುತ್ತಿದ್ದ ದೃಶ್ಯಗಳು ಕಂಡಿಬಂದವು.
ಶ್ರೀರಾಮನಿಗೆ 108 ರೀತಿಯ ಸಿಹಿ ತಿನಿಸುಗಳ ಅರ್ಪಣೆ
ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಈ ವೇಳೆ ದೇವಸ್ಥಾನದ ಆವರಣದಲ್ಲಿ ವಿಷ್ಣುಸಮಾಜದ ನೂರಾರು ರಾಮ ಭಕ್ತರು ಸೇರಿ ರಾಮನ ಭಜನೆ ಮಾಡಿದರು. ಭಕ್ತರಿಗೆ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.
ಇನ್ನು ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ವಿಷ್ಣು ಸಮಾಜದ ವತಿಯಿಂದ 108 ತರಹದ ಸಿಹಿ ತಿಂಡಿ ತಿನಿಸುಗಳನ್ನು ತಯಾರಿಸಿ ಶ್ರೀ ರಾಮನಿಗೆ ಅರ್ಪಿಸಿದರು.
ಈ ವಿಶೇಷ ದಿನದ ಅಂಗವಾಗಿ ವಿಷ್ಣು ಸಮಾಜದ ರಾಮಭಕ್ತರು ತಮ್ಮ ಅಂಗಡಿ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಆಗಮಿಸಿದ್ರು.
ಇನ್ನು ದೀರ್ಘ ಕಾಲದ ಕನಸು ನನಸಾದ ದಿನದ ಸಂತಸದಲ್ಲಿ ಯುವಕರು ಜೈ ಶ್ರೀರಾಮ್ ಘೋಷಣೆಗಳನ್ನ ಕೂಗಿ ಕುಣಿದು ಕುಪ್ಪಳಿಸಿದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…