Transparent umbrella under heavy rain against water drops splash background. Rainy weather concept.
ಮೈಸೂರು: ಜಿಲ್ಲೆಯ ವಿವಿಧೆಡೆ ನಿನ್ನೆ(ಜೂ.1) ಸಂಜೆ ಸುರಿದ ಭಾರಿ ಮಳೆಗೆ ನೂರಾರು ಎಕರೆಯ ಬೆಳೆಗಳು ನಾಶವಾಗಿದ್ದು, ಮರಗಳು ಧರೆಗುರುಳಿ ಅವಾಂತರ ಸೃಷ್ಟಿಸಿದೆ. ಹೂಣಸೂರಿನ ಹಲವೆಡೆ ಭಾರಿ ಮಳೆ ಯಾಗಿದ್ದು ಶುಂಠಿ, ತಂಬಾಕು, ಮುಸುಕಿನ ಜೋಳದ ಬೆಳೆಗಳು ನಾಶವಾಗಿದೆ.
ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ, ಡೊಡ್ಡ ಹೊಮ್ಮ ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗಿದೆ. ಗಾಳಿಯೊಂದಿಗೆ ಬಂದ ಮಳೆ ಹತ್ತಾರು ಎಕರೆಯ ಬಾಳೆ ಬೆಳೆಯನ್ನು ನಾಶಪಡಿಸಿದೆ. ಚಿಕ್ಕಹೊಮ್ಮ ಗ್ರಾಮದ ನಾಗೇಂದ್ರ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಅಂದಾಜು ಎರಡು ಸಾವಿರ ಬಾಳೆ ಬೆಳೆ ನೆಲಕಚ್ಚಿದೆ. ಇನ್ನೇನು ಕಾಟಾವಿನ ಹಂತದಲ್ಲಿದ್ದ ಬಾಳೆಗಿಡಗಳು ವರ್ಷಧಾರೆಯಿಂದ ನಾಶವಾದ ಬಗ್ಗ ರೈತ ನಾಗೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ರೂಪಾಯಿ ನಷ್ಟಕ್ಕೊಳಗಾದ ರೈತರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…