ಮೈಸೂರು: ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇತ್ತ ಆಕೆಯ ಸಾವಿನ ಸುದ್ದಿ ತಿಳಿದ ಪ್ರಿಯಕರ ಸಹ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ದಟ್ಟಗಳ್ಳಿ ಹಾಗೂ ಜ್ಯೋತಿ ನಗರದ ಮೋನಿಕಾ(20) ಮತ್ತು ಮನು(22) ಸಾವಿಗೆ ಶರಣಾದ ಪ್ರೇಮಿಗಳು.
ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಜ್ಯೋತಿನಗರದ ಮನು ಕಳೆದು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯಲ್ಲಿ ಇಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದರು. ಈ ನಡುವೆ, ಇತ್ತಿಚೇಗೆ ಈ ಜೋಡಿ ಮಧ್ಯ ಮನಸ್ತಾಪ ಉಂಟಾಗಿದೆ. ಜತೆಗೆ ಸಣ್ಣ ಪ್ರಮಾಣದ ಗಲಾಟೆಯು ಸಹ ನಡೆದಿದೆ ಎನ್ನಲಾಗಿದೆ.
ಇದರಿಂದ ಮನನೊಂದ ಯುವತಿ ನೇಣಿಗೆ ಶರಣಾಗಿದ್ದಾಳೆ. ವಿಷಯ ತಿಳಿದ ಮನು ಸ್ಥಳಕ್ಕೆ ಧಾವಿಸಿ ಮೋನಿಕಾಳನ್ನು ಆಸ್ಪತ್ರೆಗೆ ಕರೆತಂದಿದ್ದಾನೆ. ಆದರೆ, ಮೋನಿಕಾ ಅಷ್ಟೋತ್ತಿಗಾಗಲೇ ಮೃತಪಟ್ಟಿದ್ದಳು.
ತನ್ನ ಪ್ರೇಯಸಿ ಮೋನಿಕಾ ಸಾವಿನಿಂದ ಮನನೊಂದ ಮನು ಸಹ ಸಾವಿನ ಹಾದಿ ತುಳಿದಿದ್ದಾನೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…