ಮೈಸೂರು: ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇತ್ತ ಆಕೆಯ ಸಾವಿನ ಸುದ್ದಿ ತಿಳಿದ ಪ್ರಿಯಕರ ಸಹ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ದಟ್ಟಗಳ್ಳಿ ಹಾಗೂ ಜ್ಯೋತಿ ನಗರದ ಮೋನಿಕಾ(20) ಮತ್ತು ಮನು(22) ಸಾವಿಗೆ ಶರಣಾದ ಪ್ರೇಮಿಗಳು.
ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಜ್ಯೋತಿನಗರದ ಮನು ಕಳೆದು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯಲ್ಲಿ ಇಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದರು. ಈ ನಡುವೆ, ಇತ್ತಿಚೇಗೆ ಈ ಜೋಡಿ ಮಧ್ಯ ಮನಸ್ತಾಪ ಉಂಟಾಗಿದೆ. ಜತೆಗೆ ಸಣ್ಣ ಪ್ರಮಾಣದ ಗಲಾಟೆಯು ಸಹ ನಡೆದಿದೆ ಎನ್ನಲಾಗಿದೆ.
ಇದರಿಂದ ಮನನೊಂದ ಯುವತಿ ನೇಣಿಗೆ ಶರಣಾಗಿದ್ದಾಳೆ. ವಿಷಯ ತಿಳಿದ ಮನು ಸ್ಥಳಕ್ಕೆ ಧಾವಿಸಿ ಮೋನಿಕಾಳನ್ನು ಆಸ್ಪತ್ರೆಗೆ ಕರೆತಂದಿದ್ದಾನೆ. ಆದರೆ, ಮೋನಿಕಾ ಅಷ್ಟೋತ್ತಿಗಾಗಲೇ ಮೃತಪಟ್ಟಿದ್ದಳು.
ತನ್ನ ಪ್ರೇಯಸಿ ಮೋನಿಕಾ ಸಾವಿನಿಂದ ಮನನೊಂದ ಮನು ಸಹ ಸಾವಿನ ಹಾದಿ ತುಳಿದಿದ್ದಾನೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…