ಮೈಸೂರು : ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೈಸೂರಿನ ಅರಮನೆ ಮುಂಭಾಗದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬೃಹತ್ ಗಾತ್ರದ ಮರ ಧರೆಗುರುಳಿದ ಘಟನೆ ನಡೆದಿದೆ.
ಅರಮನೆ ಕಾಂಪೌಂಡ್ಗೆ ಹೊಂದಿಕೊಂಡಿರುವ ಕರ್ಜನ್ ಪಾರ್ಕ್ ಒಳಗಡೆ ಬೆಳೆಸಲಾಗಿದ್ದ ದೊಡ್ಡ ಮರ ಬಿದ್ದು ರಸ್ತೆ ಭಾಗದಲ್ಲಿ ನಿಂತಿದ್ದ ಎರಡು ಆಟೋಗಳು ಸಂಪೂರ್ಣ ಜಖಂಗೊಂಡಿವೆ.
ಇದನ್ನು ಓದಿ: ಮುಂದುವರೆದ ಮಳೆ : ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಘಟನೆ ಸಮಯದಲ್ಲಿ ಆಟೋಗಳಲ್ಲಿ ಇದ್ದ ಚಾಲಕರು ಸಲೀಂ ಮತ್ತು ಆಸಿಫ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರ ಬಿದ್ದ ಪರಿಣಾಮ ಸ್ಥಳದಲ್ಲಿ ಕ್ಷಣಿಕವಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರ ತೆರವಿಗೆ ಮೈಸೂರು ನಗರ ಪಾಲಿಕೆ ಸಿಬ್ಬಂದಿ ತಕ್ಷಣ ಕಾರ್ಯಾರಂಭ ಮಾಡಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…