ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಜಾಸ್ತಿಯಾಗಿದ್ದು, ಜನರು ಆತಂಕದಲ್ಲೇ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ.
ಮೈಸೂರಿನ ಹೊರವಲಯದ ಬೆಳವಾಡಿ ಗ್ರಾಮದ ಕೆರೆ ಪಾಪಣ್ಣ ಎಂಬುವವರ ಮನೆ ಸಮೀಪವೇ ಚಿರತೆಯೊಂದು ಬೀದಿ ನಾಯಿಯನ್ನು ಹೊತ್ತೊಯ್ದಿದೆ.
ಇದನ್ನು ಓದಿ: ಬೋನಿಗೆ ಬಿದ್ದ ಗಂಡು ಚಿರತೆ : ಗ್ರಾಮಸ್ಥರ ಆತಂಕ ದೂರ
ಚಿರತೆ ದಾಳಿ ಮಾಡುವಾಗ ನಾಲ್ಕೈದು ನಾಯಿಗಳು ಕೂಗಾಟ ನಡೆಸಿದ್ದು, ಒಂದು ನಾಯಿಯನ್ನು ಎಳೆದೊಯ್ದು ತಿಂದು ಹಾಕಿದೆ.
ಈ ದೃಶ್ಯ ಮನೆಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ದಾಳಿಯಿಂದ ಭಯಭೀತರಾಗಿರುವ ಗ್ರಾಮಸ್ಥರು ಹೆಚ್ಚಿನ ಅನಾಹುತ ಆಗುವ ಮುನ್ನವೇ ಚಿರತೆಯನ್ನು ಸೆರೆ ಹಿಡಿಯಲು ಕ್ರಮ ವಹಿಸಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…