ಮೈಸೂರು: ರಮ್ಮನಹಳ್ಳಿಯಲ್ಲಿ ಕುಡಿಯುವ ನೀರು ಘಟಕ ಸ್ಥಾಪಿಸಲು ಭೂ ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಲು ವಿಳಂಬ ಮಾಡಿರುವ ಕಾರಣ ಕೋರ್ಟ್ ಆದೇಶದಂತೆ ಮೈಸೂರು ಮಹಾನಗರ ಪಾಲಿಕೆಯ ಪಿಠೋಪಕರಣಗಳನ್ನು ಇಂದು ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು 1994ರಲ್ಲಿ ರಮ್ಮನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲು ಅನೇಕ ರ್ವೆ ನಂಬರ್ಗಳ ಸುಮಾರು 45 ಎಕರೆ ಜಮೀನುಗಳನ್ನು ಮೈಸೂರು ಮಹಾನಗರ ಪಾಲಿಕೆ ಭೂ ಸ್ವಾಧೀನಪಡಿಸಿಕೊಂಡಿತ್ತು. ಆದರೆ ಭೂ ಸ್ವಾಧೀನಪಡಿಸಿಕೊಂಡ ನಂತರ ಒಂದು ಎಕರೆಗೆ 45 ಸಾವಿರದಂತೆ ಪಾಲಿಕೆ ವತಿಯಿಂದ ರೈತರಿಗೆ ಪರಿಹಾರ ನೀಡಲು ಒಪ್ಪಂದ ಮಾಡಿಕೊಂಡಿತ್ತು. ಆದರೆ ಇದುವರೆಗೂ ಪಾಲಿಕೆ ಪರಿಹಾರ ಧನ ನೀಡದ ಕಾರಣ ಗ್ರಾಮಸ್ಥರು ಕೋರ್ಟ್ ಮೊರೆ ಹೋಗಿದ್ದರು.
ಗ್ರಾಮಸ್ಥರ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್ 2021ರಲ್ಲಿ ಸಂತ್ರಸ್ಥರಿಗೆ ಅಧಿಕ ಹಾಗೂ ಸೂಕ್ತ ಪರಿಹಾರ ಕೊಡುವಂತೆ ಆದೇಶ ನೀಡಿತ್ತು. ಆದರೆ ಮೈಸೂರು ಮಹಾನಗರ ಪಾಲಿಕೆಯೂ ಕೋರ್ಟ್ನ ಆದೇಶವನ್ನು ವಿಳಂಬ ಮಾಡಿದಲ್ಲದೇ, ಆದೇಶದ ಯಾವ ನಿಯಮವನ್ನು ಪಾಲಿಸಿರಲಿಲ್ಲ. ಹೀಗಾಗಿ ಪಾಲಿಕೆಯ ಮಾಲುಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿತ್ತು.
ಈ ಅದೇಶದ ಅನ್ವಯ ಕೋರ್ಟ್ನ ಅಮೀನರು ಮತ್ತು ವಕೀಲರ ಸಮ್ಮುಖದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಪಿಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…