ಮೈಸೂರು

ಮೈಸೂರು: ಕೋರ್ಟ್‌ ಆದೇಶದ ಮೇರೆಗೆ ಮಹಾನಗರ ಪಾಲಿಕೆಯ ಪಿಠೋಪಕರಣಗಳು ಜಪ್ತಿ

ಮೈಸೂರು: ರಮ್ಮನಹಳ್ಳಿಯಲ್ಲಿ ಕುಡಿಯುವ ನೀರು ಘಟಕ ಸ್ಥಾಪಿಸಲು ಭೂ ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಲು ವಿಳಂಬ ಮಾಡಿರುವ ಕಾರಣ ಕೋರ್ಟ್‌ ಆದೇಶದಂತೆ ಮೈಸೂರು ಮಹಾನಗರ ಪಾಲಿಕೆಯ ಪಿಠೋಪಕರಣಗಳನ್ನು ಇಂದು ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು 1994ರಲ್ಲಿ ರಮ್ಮನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲು ಅನೇಕ ರ್ವೆ ನಂಬರ್‌ಗಳ ಸುಮಾರು 45 ಎಕರೆ ಜಮೀನುಗಳನ್ನು ಮೈಸೂರು ಮಹಾನಗರ ಪಾಲಿಕೆ ಭೂ ಸ್ವಾಧೀನಪಡಿಸಿಕೊಂಡಿತ್ತು. ಆದರೆ ಭೂ ಸ್ವಾಧೀನಪಡಿಸಿಕೊಂಡ ನಂತರ ಒಂದು ಎಕರೆಗೆ 45 ಸಾವಿರದಂತೆ ಪಾಲಿಕೆ ವತಿಯಿಂದ ರೈತರಿಗೆ ಪರಿಹಾರ ನೀಡಲು ಒಪ್ಪಂದ ಮಾಡಿಕೊಂಡಿತ್ತು. ಆದರೆ ಇದುವರೆಗೂ ಪಾಲಿಕೆ ಪರಿಹಾರ ಧನ ನೀಡದ ಕಾರಣ ಗ್ರಾಮಸ್ಥರು ಕೋರ್ಟ್‌ ಮೊರೆ ಹೋಗಿದ್ದರು.

ಗ್ರಾಮಸ್ಥರ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್‌ 2021ರಲ್ಲಿ ಸಂತ್ರಸ್ಥರಿಗೆ ಅಧಿಕ ಹಾಗೂ ಸೂಕ್ತ ಪರಿಹಾರ ಕೊಡುವಂತೆ ಆದೇಶ ನೀಡಿತ್ತು. ಆದರೆ ಮೈಸೂರು ಮಹಾನಗರ ಪಾಲಿಕೆಯೂ ಕೋರ್ಟ್‌ನ ಆದೇಶವನ್ನು ವಿಳಂಬ ಮಾಡಿದಲ್ಲದೇ, ಆದೇಶದ ಯಾವ ನಿಯಮವನ್ನು ಪಾಲಿಸಿರಲಿಲ್ಲ. ಹೀಗಾಗಿ ಪಾಲಿಕೆಯ ಮಾಲುಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿತ್ತು.

ಈ ಅದೇಶದ ಅನ್ವಯ ಕೋರ್ಟ್‌ನ ಅಮೀನರು ಮತ್ತು ವಕೀಲರ ಸಮ್ಮುಖದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಪಿಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…

28 mins ago

ಓದುಗರ ಪತ್ರ: ಬಿಎಂಟಿಸಿ ಜನಹಿತ ಕಾಯಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…

49 mins ago

ಓದುಗರ ಪತ್ರ: ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…

52 mins ago

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…

1 hour ago

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

6 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

6 hours ago