ಮೈಸೂರು

ಮೈಸೂರು: ಕೋರ್ಟ್‌ ಆದೇಶದ ಮೇರೆಗೆ ಮಹಾನಗರ ಪಾಲಿಕೆಯ ಪಿಠೋಪಕರಣಗಳು ಜಪ್ತಿ

ಮೈಸೂರು: ರಮ್ಮನಹಳ್ಳಿಯಲ್ಲಿ ಕುಡಿಯುವ ನೀರು ಘಟಕ ಸ್ಥಾಪಿಸಲು ಭೂ ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಲು ವಿಳಂಬ ಮಾಡಿರುವ ಕಾರಣ ಕೋರ್ಟ್‌ ಆದೇಶದಂತೆ ಮೈಸೂರು ಮಹಾನಗರ ಪಾಲಿಕೆಯ ಪಿಠೋಪಕರಣಗಳನ್ನು ಇಂದು ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು 1994ರಲ್ಲಿ ರಮ್ಮನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲು ಅನೇಕ ರ್ವೆ ನಂಬರ್‌ಗಳ ಸುಮಾರು 45 ಎಕರೆ ಜಮೀನುಗಳನ್ನು ಮೈಸೂರು ಮಹಾನಗರ ಪಾಲಿಕೆ ಭೂ ಸ್ವಾಧೀನಪಡಿಸಿಕೊಂಡಿತ್ತು. ಆದರೆ ಭೂ ಸ್ವಾಧೀನಪಡಿಸಿಕೊಂಡ ನಂತರ ಒಂದು ಎಕರೆಗೆ 45 ಸಾವಿರದಂತೆ ಪಾಲಿಕೆ ವತಿಯಿಂದ ರೈತರಿಗೆ ಪರಿಹಾರ ನೀಡಲು ಒಪ್ಪಂದ ಮಾಡಿಕೊಂಡಿತ್ತು. ಆದರೆ ಇದುವರೆಗೂ ಪಾಲಿಕೆ ಪರಿಹಾರ ಧನ ನೀಡದ ಕಾರಣ ಗ್ರಾಮಸ್ಥರು ಕೋರ್ಟ್‌ ಮೊರೆ ಹೋಗಿದ್ದರು.

ಗ್ರಾಮಸ್ಥರ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್‌ 2021ರಲ್ಲಿ ಸಂತ್ರಸ್ಥರಿಗೆ ಅಧಿಕ ಹಾಗೂ ಸೂಕ್ತ ಪರಿಹಾರ ಕೊಡುವಂತೆ ಆದೇಶ ನೀಡಿತ್ತು. ಆದರೆ ಮೈಸೂರು ಮಹಾನಗರ ಪಾಲಿಕೆಯೂ ಕೋರ್ಟ್‌ನ ಆದೇಶವನ್ನು ವಿಳಂಬ ಮಾಡಿದಲ್ಲದೇ, ಆದೇಶದ ಯಾವ ನಿಯಮವನ್ನು ಪಾಲಿಸಿರಲಿಲ್ಲ. ಹೀಗಾಗಿ ಪಾಲಿಕೆಯ ಮಾಲುಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿತ್ತು.

ಈ ಅದೇಶದ ಅನ್ವಯ ಕೋರ್ಟ್‌ನ ಅಮೀನರು ಮತ್ತು ವಕೀಲರ ಸಮ್ಮುಖದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಪಿಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಅರ್ಚನ ಎಸ್‌ ಎಸ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago