ಮೈಸೂರು: ನಗರದ ನೋಟು ಮುದ್ರಣಾಲಯ ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಸತತ ೨೦ ದಿನಗಳ ಬಳಿಕ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ.
ನಗರದ ನೋಟು ಮುದ್ರಾಣಾಲಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಬಳಿಕ ಸಿಸಿಟಿವಿ ಕ್ಯಾಮೆರಾಗಳ ಮೂಲಕ ಚಿರತೆಯ ಚಲನವಲನ ಕಂಡುಹಿಡಿದು ಆರ್.ಬಿ.ಐ ಮ್ಯಾನೇಜ್ಮೆಂಟ್ ಚಿರತೆ ಕಾರ್ಯಪಡೆಗೆ ಮಾಹಿತಿ ನೀಡಿತ್ತು. ಬಳಿಕ ಉಪ ವಲಯ ಅರಣ್ಯಧಿಕಾರಿ ಹಾಗೂ ಚಿರತೆ ಕಾರ್ಯಪಡೆಯಿಂದ ೩೦ ಜನರ ತಂಡವನ್ನು ರಚಿಸಲಾಗಿತ್ತು.
ತಂಡದ ಕಾರ್ಯಾಚರಣೆಯ ನಡುವೆ ಮುದ್ರಣಾಲಯದ ಆವರಣ ಸ್ಥಳ ಪರಿಶೀಲಿಸಿ ಚಿರತೆ ಸೆರೆಗಾಗಿ ಬೋನ್ ಇಡಲಾಗಿತ್ತು. ಶುಕ್ರವಾರ ಬೆಳಿಗ್ಗೆ ಗಂಡು ಚಿರತೆ ಬೋನಿಗೆ ಬಿದ್ದಿದೆ. ಆತಂಕದಲ್ಲಿ ನೌಕರರು ನಿಟ್ಟುಸಿರು ಬಿಟ್ಟಿದ್ದಾರೆ. ಬಳಿಕ ನಗರದ ಅರಣ್ಯ ಭವನಕ್ಕೆ ಚಿರತೆಯನ್ನು ಸ್ಥಳಾಂತರಿಸಿ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ಮೈಸೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…