ಮೈಸೂರು: ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ವಿಮಾನ ನಿಲ್ದಾಣ ವಿಸ್ತರಣಾ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಕುರಿತು ನಾಗರೀಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಗುರುವಾರ ದೆಹಲಿ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿದ ಸಂಸದರು, ವಿಮಾನ ನಿಲ್ದಾಣ ವಿಸ್ತರಣೆ ಕುರಿತು ಮುಂದಿನ ಕ್ರಮ ಕೈಗೊಳ್ಳಲು ಮತ್ತು ಭೂ ಹಸ್ತಾಂತರ ಪ್ರಕ್ರಿಯೆಯನ್ನು ಶೀಘ್ರವಾಗಿ ಪ್ರಾರಂಭಿಸುವ ಕುರಿತು ಸಚಿವರಲ್ಲಿ ಮನವರಿಕೆ ಮಾಡಿದರು. ಜತೆಗೆ ಭೂಸ್ವಾಧೀನ ಪ್ರಕ್ರಿಯೆಗೆ ಅಡ್ಡಿಯಾಗಿರುವ ವಿವಿಧ ಸಮಸ್ಯೆಗಳನ್ನು ಮತ್ತು ಅದನ್ನು ಪರಿಹರಿಸಲು ಅವರ ಸೂಕ್ತ ನಿರ್ದೇಶನವನ್ನು ಕೇಳಿದರು.
ಇದೆ ವೇಳೆ ಮೈಸೂರಿಗೆ ಹೆಚ್ಚಿನ ವಿಮಾನಗಳ ಸಂಪರ್ಕ ಕಲ್ಪಿಸಲು ಸಹಕರಿಸಬೇಕೆಂಬ ವಿನಂತಿಯನ್ನು ಅವರ ಮುಂದಿಟ್ಟರು. ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂಧಿಸಿದ ಅವರು ಆದಷ್ಟು ಬೇಗ ಮೈಸೂರಿನಿಂದ ಹೊಸ ವಿಮಾನ ಸೇವೆಗಳನ್ನು ಪ್ರಾರಂಭಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸುವುದಾಗಿ ನಮಗೆ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೇರ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…