ಮೈಸೂರು: ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ವಿಮಾನ ನಿಲ್ದಾಣ ವಿಸ್ತರಣಾ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಕುರಿತು ನಾಗರೀಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಗುರುವಾರ ದೆಹಲಿ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿದ ಸಂಸದರು, ವಿಮಾನ ನಿಲ್ದಾಣ ವಿಸ್ತರಣೆ ಕುರಿತು ಮುಂದಿನ ಕ್ರಮ ಕೈಗೊಳ್ಳಲು ಮತ್ತು ಭೂ ಹಸ್ತಾಂತರ ಪ್ರಕ್ರಿಯೆಯನ್ನು ಶೀಘ್ರವಾಗಿ ಪ್ರಾರಂಭಿಸುವ ಕುರಿತು ಸಚಿವರಲ್ಲಿ ಮನವರಿಕೆ ಮಾಡಿದರು. ಜತೆಗೆ ಭೂಸ್ವಾಧೀನ ಪ್ರಕ್ರಿಯೆಗೆ ಅಡ್ಡಿಯಾಗಿರುವ ವಿವಿಧ ಸಮಸ್ಯೆಗಳನ್ನು ಮತ್ತು ಅದನ್ನು ಪರಿಹರಿಸಲು ಅವರ ಸೂಕ್ತ ನಿರ್ದೇಶನವನ್ನು ಕೇಳಿದರು.
ಇದೆ ವೇಳೆ ಮೈಸೂರಿಗೆ ಹೆಚ್ಚಿನ ವಿಮಾನಗಳ ಸಂಪರ್ಕ ಕಲ್ಪಿಸಲು ಸಹಕರಿಸಬೇಕೆಂಬ ವಿನಂತಿಯನ್ನು ಅವರ ಮುಂದಿಟ್ಟರು. ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂಧಿಸಿದ ಅವರು ಆದಷ್ಟು ಬೇಗ ಮೈಸೂರಿನಿಂದ ಹೊಸ ವಿಮಾನ ಸೇವೆಗಳನ್ನು ಪ್ರಾರಂಭಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸುವುದಾಗಿ ನಮಗೆ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೇರ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ನೀಡಿದ್ದಾರೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…