ಮೈಸೂರು

ಮೈಸೂರು: ಮೇಲಧಿಕಾರಿಗಳ ಕಿರುಕುಳ ಆರೋಪ; ಎಫ್‌ಡಿಎ ಅಧಿಕಾರಿ ಆತ್ಮಹತ್ಯೆ

ಮೈಸೂರು: ಸರ್ಕಾರಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ 32ವರ್ಷದ ಪ್ರಜ್ವಲ್‌ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೇಲಧಿಕಾರಿಗಳಾದ ತಹಶೀಲ್ದಾರ್ ಪ್ರವೀಣ್, ಶಿರಸ್ತೇದಾರ್ ಗುರುರಾಜ್ ವಿರುದ್ಧ ಕಿರುಕುಳದ ಗಂಭೀರ ಆರೋಪ ಕೇಳಿ ಬಂದಿದೆ.

ಮಡಿಕೇರಿ ತಹಶೀಲ್ದಾರ್ ಕಚೇರಿ ಬಿಲ್ಲಿಂಗ್ ವಿಭಾಗದಲ್ಲಿ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಪ್ರಜ್ವಲ್‌ಗೆ ಆರು ತಿಂಗಳಿಂದ ತಹಸೀಲ್ದಾರ್ ಹಾಗೂ ಶಿರಸ್ತೇದಾರ್‌ ಮಾನಸಿಕ ಕಿರುಕುಳ ನೀಡುತ್ತಿದ್ದರು. ಜೊತೆಗೆ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಮುಂದೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಜ್ವಲ್‌ ತಾಯಿ, ಪತ್ನಿ ಜತೆ ನೋವು ತೋಡಿಕೊಂಡಿದ್ದರು.

ಇತ್ತೀಚೆಗೆ ಫೆಸ್ಟಿವಲ್ ಅಡ್ವಾನ್ಸ್ ಬಿಲ್‌ನಲ್ಲಿ ತಹಸೀಲ್ದಾರ್ ಸಹಿ ಹೋಲಿಕೆ ಆಗಿರಲಿಲ್ಲ. ಇದನ್ನೇ ನೆಪ ಮಾಡಿಕೊಂಡು ‘ನೀನೇ ಸಹಿ ಮಾಡಿದ್ದೀಯ’ ಎಂದು ಪ್ರಜ್ವಲ್ ಮೇಲೆ ಆರೋಪ ಮಾಡಿದ್ದ ತಹಸೀಲ್ದಾರ್ ಪ್ರವೀಣ್
ಮೀಟಿಂಗ್ ಮಾಡಿ ಸಸ್ಪೆಂಡ್ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದರು ಎಂದು ಹೇಳಲಾಗಿದೆ.

ಕಾಲು ಹಿಡಿದು ಬೇಡಿಕೊಂಡರೂ ಬಾಯಿಗೆ ಬಂದಂತೆ ಅಧಿಕಾರಿಗಳು ಮಾತನಾಡುತ್ತಿದ್ದರು. ಇದರಿಂದ ಮನನೊಂದ ಪ್ರಜ್ವಲ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಐಸಿಯುನಲ್ಲಿ ಚಿಕಿತ್ಸೆ ಪಡೆಯುವಾಗಲೇ ಪೊಲೀಸರನ್ನು ಭೇಟಿ ಮಾಡಲು ಮೃತ ಪ್ರಜ್ವಲ್ ಬಯಸಿದ್ದರು. ಲಿಖಿತ ಹೇಳಿಕೆಯನ್ನು ಮೈಸೂರಿನ ಅಶೋಕಪುರಂ ಠಾಣೆಗೆ ಕಳುಹಿಸಿದ್ದರು ಪೊಲೀಸರು ಬರುವ ಮುನ್ನವೇ ಪ್ರಜ್ವಲ್‌ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರಜ್ವಲ್ ಪತ್ನಿ ಬಿ‌.ಜೆ.ಶೃತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

2 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

2 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

2 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

2 hours ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

2 hours ago