ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮೈಸೂರು ವತಿಯಿಂದ 2025-26ನೇ ಸಾಲಿನ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್(ಅಪ್ರೆಂಟಿಸ್ ಸಂಖ್ಯೆ 77) ಹಾಗೂ ಸಿವಿಲ್ ಇಂಜಿನಿಯರಿಂಗ್(ಅಪ್ರೆಂಟಿಸ್ ಸಂಖ್ಯೆ 03) ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಈ ಅಭ್ಯರ್ಥಿಗಳಿಗೆ ಪ್ರತಿ ಮಾಹೆಯ ಅಪ್ರೆಂಟಿಸ್ ವೇತನ 9000/- ರೂ. ನೀಡಲಾಗುವುದು.
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್(ಅಪ್ರೆಂಟಿಸ್ ಸಂಖ್ಯೆ 51) ಹಾಗೂ ಸಿವಿಲ್ ಇಂಜಿನಿಯರಿಂಗ್(ಅಪ್ರೆಂಟಿಸ್ ಸಂಖ್ಯೆ 04) ವಿಷಯದಲ್ಲಿ ಡಿಪ್ಲೊಮಾ ಮಾಡಿರುವ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಇವರುಗಳಿಗೆ ಪ್ರತಿ ಮಾಹೆ 8000/- ಅಪ್ರೆಂಟಿಸ್ ವೇತನ ನೀಡಲಾಗುವುದು.
ಉಳಿದಂತೆ ಬಿ.ಕಾಂ(ಅಪ್ರೆಂಟಿಸ್ ಸಂಖ್ಯೆ 55), ಬಿ.ಬಿ.ಎ(ಅಪ್ರೆಂಟಿಸ್ ಸಂಖ್ಯೆ 15), ಬಿ.ಸಿ.ಎ(ಅಪ್ರೆಂಟಿಸ್ ಸಂಖ್ಯೆ 15), ಬಿ.ಎ(ಅಪ್ರೆಂಟಿಸ್ ಸಂಖ್ಯೆ 20) ಹಾಗೂ ಬಿ.ಎಸ್ಸಿ(ಅಪ್ರೆಂಟಿಸ್ ಸಂಖ್ಯೆ 10) ವಿಷಯಗಳ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದ್ದು, ಇವರುಗಳಿಗೆ ಪ್ರತಿ ಮಾಹೆಯ ಅಪ್ರೆಂಟಿಸ್ ವೇತನ 9000/- ರೂ. ನೀಡಲಾಗುವುದು.
ಅಪ್ರೆಂಟಿಸ್ ತರಬೇತಿಗೆ ಅರ್ಜಿಸಲ್ಲಿಸುವ ಇಂಜಿನಿಯರಿಂಗ್ ಪದವೀಧರ, ಪದವೀಧರ(ಇಂಜಿನಿಯರಿಂಗ್ ಹೊರತು), ಡಿಪ್ಲೊಮಾ ಅಭ್ಯರ್ಥಿಗಳು 2020, 2021, 2022, 2023 ಹಾಗೂ 2024ನೇ ಸಾಲಿನಲ್ಲಿ ಉತ್ತೀರ್ಣರಾಗಿರಬೇಕು. ಆಸಕ್ತ ಅಭ್ಯರ್ಥಿಗಳು 20-01-2025ರಿಂದ ಆನ್ಲೈನ್ನಲ್ಲಿ ಅರ್ಜಿ ಪಡೆಯಬಹುದಾಗಿದ್ದು 06-02-2025 ಆನ್ಲೈನ್ ಅಪ್ಲಿಕೇಷನ್ ಸಲ್ಲಿಸಲು ಕೊನೆಯ ದಿನವಾಗಿದೆ.
ಆಸಕ್ತ ಅಭ್ಯರ್ಥಿಗಳು ಚಾವಿಸಾನಿನಿ ಅಧಿಕೃತ ವೆಬ್ ಸೈಟ್ https://cescmysore.karnataka.gov.in ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಚಾವಿಸಾನಿನಿ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…