ಮೈಸೂರು

ಮೈಸೂರು : ಸೆಸ್ಕ್‌ನಲ್ಲಿ ಅಪ್ರೆಂಟಿಸ್‌ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು: ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮೈಸೂರು ವತಿಯಿಂದ 2025-26ನೇ ಸಾಲಿನ ಒಂದು ವರ್ಷದ ಅಪ್ರೆಂಟಿಸ್‌ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌(ಅಪ್ರೆಂಟಿಸ್‌ ಸಂಖ್ಯೆ 77) ಹಾಗೂ ಸಿವಿಲ್‌ ಇಂಜಿನಿಯರಿಂಗ್‌(ಅಪ್ರೆಂಟಿಸ್‌ ಸಂಖ್ಯೆ 03) ವಿಷಯದಲ್ಲಿ ಇಂಜಿನಿಯರಿಂಗ್‌ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಈ ಅಭ್ಯರ್ಥಿಗಳಿಗೆ ಪ್ರತಿ ಮಾಹೆಯ ಅಪ್ರೆಂಟಿಸ್‌ ವೇತನ 9000/- ರೂ. ನೀಡಲಾಗುವುದು.

ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌(ಅಪ್ರೆಂಟಿಸ್‌ ಸಂಖ್ಯೆ 51) ಹಾಗೂ ಸಿವಿಲ್‌ ಇಂಜಿನಿಯರಿಂಗ್‌(ಅಪ್ರೆಂಟಿಸ್‌ ಸಂಖ್ಯೆ 04) ವಿಷಯದಲ್ಲಿ ಡಿಪ್ಲೊಮಾ ಮಾಡಿರುವ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಇವರುಗಳಿಗೆ ಪ್ರತಿ ಮಾಹೆ 8000/- ಅಪ್ರೆಂಟಿಸ್‌ ವೇತನ ನೀಡಲಾಗುವುದು.

ಉಳಿದಂತೆ ಬಿ.ಕಾಂ(ಅಪ್ರೆಂಟಿಸ್‌ ಸಂಖ್ಯೆ 55), ಬಿ.ಬಿ.ಎ(ಅಪ್ರೆಂಟಿಸ್‌ ಸಂಖ್ಯೆ 15), ಬಿ.ಸಿ.ಎ(ಅಪ್ರೆಂಟಿಸ್‌ ಸಂಖ್ಯೆ 15), ಬಿ.ಎ(ಅಪ್ರೆಂಟಿಸ್‌ ಸಂಖ್ಯೆ 20) ಹಾಗೂ ಬಿ.ಎಸ್ಸಿ(ಅಪ್ರೆಂಟಿಸ್‌ ಸಂಖ್ಯೆ 10) ವಿಷಯಗಳ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದ್ದು, ಇವರುಗಳಿಗೆ ಪ್ರತಿ ಮಾಹೆಯ ಅಪ್ರೆಂಟಿಸ್‌ ವೇತನ 9000/- ರೂ. ನೀಡಲಾಗುವುದು.

ಅಪ್ರೆಂಟಿಸ್‌ ತರಬೇತಿಗೆ ಅರ್ಜಿಸಲ್ಲಿಸುವ ಇಂಜಿನಿಯರಿಂಗ್‌ ಪದವೀಧರ, ಪದವೀಧರ(ಇಂಜಿನಿಯರಿಂಗ್‌ ಹೊರತು), ಡಿಪ್ಲೊಮಾ ಅಭ್ಯರ್ಥಿಗಳು 2020, 2021, 2022, 2023 ಹಾಗೂ 2024ನೇ ಸಾಲಿನಲ್ಲಿ ಉತ್ತೀರ್ಣರಾಗಿರಬೇಕು. ಆಸಕ್ತ ಅಭ್ಯರ್ಥಿಗಳು 20-01-2025ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಪಡೆಯಬಹುದಾಗಿದ್ದು 06-02-2025 ಆನ್‌ಲೈನ್‌ ಅಪ್ಲಿಕೇಷನ್‌ ಸಲ್ಲಿಸಲು ಕೊನೆಯ ದಿನವಾಗಿದೆ.

ಆಸಕ್ತ ಅಭ್ಯರ್ಥಿಗಳು ಚಾವಿಸಾನಿನಿ ಅಧಿಕೃತ ವೆಬ್‌ ಸೈಟ್‌ https://cescmysore.karnataka.gov.in ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಚಾವಿಸಾನಿನಿ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

10 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

11 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

14 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago