ಮೈಸೂರು

ಮೈಸೂರು: ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು: ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಹಾಗೂ ಡಾ. ಗಂಗೂಬಾಯಿ ಹಾನಗಲ್ ಹುಬ್ಬಳ್ಳಿ ಕೇಂದ್ರದಲ್ಲಿ ಎಂ.ಪಿ.ಎ ಬ್ಯಾಚುಲರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್, ಸ್ನಾತಕೋತ್ತರ ಪದವಿ ಮಾಸ್ಟರ್ ಆಫ್ ಆರ್ಟ್ಸ್ (MPA) ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯು.ಜಿ.ಸಿ ನಿಯಮಾವಳಿಗಳ ಅನ್ವಯ ಅರ್ಹತೆ ಹೊಂದಿರುವವರು ನೃತ್ಯ, ಭರತನಾಟ್ಯ ಕಥಕ್, ಹಿಂದೂಸ್ಥಾನಿ, ಮತ್ತು ಕರ್ನಾಟಕ ಸಂಗೀತ, ನಾಟಕ, ವೀಣೆ. ಮೃದಂಗ, ತಬಲ, ಕನ್ನಡ, ಸಂಸ್ಕೃತ ಮತ್ತು ವಿಷಯಗಳಿಗೆ ಸಂಬoಧಿಸಿದoತೆ ನೆಟ್/ಕೆ-ಸೆಟ್ ಉತ್ತೀರ್ಣರಾಗಿರಬೇಕು.

ವಿಶ್ವವಿದ್ಯಾಲಯದ ಅಧೀಕೃತ ವೆಬ್‌ಸೈಟ್ https://musicuniversity.ac.in ನಲ್ಲಿ ಅರ್ಜಿ ಡೌನ್ಲೊಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 15 ರೊಳಗೆ ಕಚೇರಿಗೆ ಸಲ್ಲಿಸಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳೊಂದಿಗೆ ಸಾಮಾನ್ಯ ವರ್ಗ-ರೂ.500 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 (ಪ್ರಮಾಣ ಪತ್ರದೊಂದಿಗೆ,) ಅಭ್ಯರ್ಥಿಗಳು ರೂ.250 ಗಳನ್ನು ವಿಶ್ವವಿದ್ಯಾಲಯವು ಮೈಸೂರಿನ ಕೃಷ್ಣಮೂರ್ತಿ ಪುರಂ ಶಾಖೆಯ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ ಹಣಕಾಸು ಅಧಿಕಾರಿ ಇವರ ಪದನಾಮವನ್ನು ಹೊಂದಿರುವ ಉಳಿತಾಯ ಖಾತೆ ಸಂಖ್ಯೆ:64097891316 (IFSC CODE:SBIN0040056) ಚಲನ್ ಅಥವಾ ಯಾವುದೆ ರಾಷ್ಟ್ರೀಕೃತ ಬ್ಯಾಂಕುಗಳಿoದ ಮೈಸೂರಿನ ಕೆ.ಎಸ್.ಜಿ.ಹೆಚ್ ಸಂಗೀತ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳ ಹೆಸರಿನಲ್ಲಿ ಮೇಲಿನ ಬ್ಯಾಂಕಿಗೆ ಸಂದಾಯವಾಗುವoತೆ ಡಿ.ಡಿ ಯನ್ನು ಪಡೆದು ಲಗತ್ತಿಸಬೇಕು.

ಅರ್ಹತೆ, ಅನುಭವದ ವಿವರಗಳು ಮತ್ತು ದೃಢೀಕೃತ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯದ ಕುಲಸಚಿವರಿಗೆ ಅರ್ಜಿಗಳನ್ನು ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯದ ದೂ.ಸಂ: 0821-2332703 ಅನ್ನು ಸಂಪರ್ಕಿಸಬಹುದು ಎಂದು ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

2 hours ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

2 hours ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

2 hours ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

3 hours ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

7 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

7 hours ago