ಮೈಸೂರು

ಮೈಸೂರು: ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು: ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಹಾಗೂ ಡಾ. ಗಂಗೂಬಾಯಿ ಹಾನಗಲ್ ಹುಬ್ಬಳ್ಳಿ ಕೇಂದ್ರದಲ್ಲಿ ಎಂ.ಪಿ.ಎ ಬ್ಯಾಚುಲರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್, ಸ್ನಾತಕೋತ್ತರ ಪದವಿ ಮಾಸ್ಟರ್ ಆಫ್ ಆರ್ಟ್ಸ್ (MPA) ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯು.ಜಿ.ಸಿ ನಿಯಮಾವಳಿಗಳ ಅನ್ವಯ ಅರ್ಹತೆ ಹೊಂದಿರುವವರು ನೃತ್ಯ, ಭರತನಾಟ್ಯ ಕಥಕ್, ಹಿಂದೂಸ್ಥಾನಿ, ಮತ್ತು ಕರ್ನಾಟಕ ಸಂಗೀತ, ನಾಟಕ, ವೀಣೆ. ಮೃದಂಗ, ತಬಲ, ಕನ್ನಡ, ಸಂಸ್ಕೃತ ಮತ್ತು ವಿಷಯಗಳಿಗೆ ಸಂಬoಧಿಸಿದoತೆ ನೆಟ್/ಕೆ-ಸೆಟ್ ಉತ್ತೀರ್ಣರಾಗಿರಬೇಕು.

ವಿಶ್ವವಿದ್ಯಾಲಯದ ಅಧೀಕೃತ ವೆಬ್‌ಸೈಟ್ https://musicuniversity.ac.in ನಲ್ಲಿ ಅರ್ಜಿ ಡೌನ್ಲೊಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 15 ರೊಳಗೆ ಕಚೇರಿಗೆ ಸಲ್ಲಿಸಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳೊಂದಿಗೆ ಸಾಮಾನ್ಯ ವರ್ಗ-ರೂ.500 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 (ಪ್ರಮಾಣ ಪತ್ರದೊಂದಿಗೆ,) ಅಭ್ಯರ್ಥಿಗಳು ರೂ.250 ಗಳನ್ನು ವಿಶ್ವವಿದ್ಯಾಲಯವು ಮೈಸೂರಿನ ಕೃಷ್ಣಮೂರ್ತಿ ಪುರಂ ಶಾಖೆಯ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ ಹಣಕಾಸು ಅಧಿಕಾರಿ ಇವರ ಪದನಾಮವನ್ನು ಹೊಂದಿರುವ ಉಳಿತಾಯ ಖಾತೆ ಸಂಖ್ಯೆ:64097891316 (IFSC CODE:SBIN0040056) ಚಲನ್ ಅಥವಾ ಯಾವುದೆ ರಾಷ್ಟ್ರೀಕೃತ ಬ್ಯಾಂಕುಗಳಿoದ ಮೈಸೂರಿನ ಕೆ.ಎಸ್.ಜಿ.ಹೆಚ್ ಸಂಗೀತ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳ ಹೆಸರಿನಲ್ಲಿ ಮೇಲಿನ ಬ್ಯಾಂಕಿಗೆ ಸಂದಾಯವಾಗುವoತೆ ಡಿ.ಡಿ ಯನ್ನು ಪಡೆದು ಲಗತ್ತಿಸಬೇಕು.

ಅರ್ಹತೆ, ಅನುಭವದ ವಿವರಗಳು ಮತ್ತು ದೃಢೀಕೃತ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯದ ಕುಲಸಚಿವರಿಗೆ ಅರ್ಜಿಗಳನ್ನು ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯದ ದೂ.ಸಂ: 0821-2332703 ಅನ್ನು ಸಂಪರ್ಕಿಸಬಹುದು ಎಂದು ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಲ್ಲೆಂದರಲ್ಲಿ ಕಸ ಎಸೆಯಲು ವಿದ್ಯೆ ಕಲಿಯಬೇಕೆ?!

ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು)  ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…

2 hours ago

ಓದುಗರ ಪತ್ರ: ಅನಧಿಕೃತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ

ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ…

2 hours ago

ಓದುಗರ ಪತ್ರ: ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ ವಸೂಲಿಗೆ ಕಡಿವಾಣ ಹಾಕಿ

ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ…

2 hours ago

ಓದುಗರ ಪತ್ರ: ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ…

2 hours ago

ವಿದ್ಯುತ್ ಅವಘಡ ತಪ್ಪಿಸಲು ಸುರಕ್ಷತಾ ನಿಯಮ ಪಾಲಿಸಿ

ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ …

2 hours ago

ಮಾರುಕಟ್ಟೆಗೆ ಲಗ್ಗೆಯಿಟ್ಟ ಕಡು ನೀಲಿ ಸುಂದರಿ!

ದಿನೇಶ್‌ಕುಮಾರ್ ಎಚ್.ಎಸ್. ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ ಮೈಸೂರು: ಅಪಾರ…

2 hours ago