ಮೈಸೂರು

ಮೈಸೂರು: ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು: ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಹಾಗೂ ಡಾ. ಗಂಗೂಬಾಯಿ ಹಾನಗಲ್ ಹುಬ್ಬಳ್ಳಿ ಕೇಂದ್ರದಲ್ಲಿ ಎಂ.ಪಿ.ಎ ಬ್ಯಾಚುಲರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್, ಸ್ನಾತಕೋತ್ತರ ಪದವಿ ಮಾಸ್ಟರ್ ಆಫ್ ಆರ್ಟ್ಸ್ (MPA) ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯು.ಜಿ.ಸಿ ನಿಯಮಾವಳಿಗಳ ಅನ್ವಯ ಅರ್ಹತೆ ಹೊಂದಿರುವವರು ನೃತ್ಯ, ಭರತನಾಟ್ಯ ಕಥಕ್, ಹಿಂದೂಸ್ಥಾನಿ, ಮತ್ತು ಕರ್ನಾಟಕ ಸಂಗೀತ, ನಾಟಕ, ವೀಣೆ. ಮೃದಂಗ, ತಬಲ, ಕನ್ನಡ, ಸಂಸ್ಕೃತ ಮತ್ತು ವಿಷಯಗಳಿಗೆ ಸಂಬoಧಿಸಿದoತೆ ನೆಟ್/ಕೆ-ಸೆಟ್ ಉತ್ತೀರ್ಣರಾಗಿರಬೇಕು.

ವಿಶ್ವವಿದ್ಯಾಲಯದ ಅಧೀಕೃತ ವೆಬ್‌ಸೈಟ್ https://musicuniversity.ac.in ನಲ್ಲಿ ಅರ್ಜಿ ಡೌನ್ಲೊಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 15 ರೊಳಗೆ ಕಚೇರಿಗೆ ಸಲ್ಲಿಸಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳೊಂದಿಗೆ ಸಾಮಾನ್ಯ ವರ್ಗ-ರೂ.500 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 (ಪ್ರಮಾಣ ಪತ್ರದೊಂದಿಗೆ,) ಅಭ್ಯರ್ಥಿಗಳು ರೂ.250 ಗಳನ್ನು ವಿಶ್ವವಿದ್ಯಾಲಯವು ಮೈಸೂರಿನ ಕೃಷ್ಣಮೂರ್ತಿ ಪುರಂ ಶಾಖೆಯ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ ಹಣಕಾಸು ಅಧಿಕಾರಿ ಇವರ ಪದನಾಮವನ್ನು ಹೊಂದಿರುವ ಉಳಿತಾಯ ಖಾತೆ ಸಂಖ್ಯೆ:64097891316 (IFSC CODE:SBIN0040056) ಚಲನ್ ಅಥವಾ ಯಾವುದೆ ರಾಷ್ಟ್ರೀಕೃತ ಬ್ಯಾಂಕುಗಳಿoದ ಮೈಸೂರಿನ ಕೆ.ಎಸ್.ಜಿ.ಹೆಚ್ ಸಂಗೀತ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳ ಹೆಸರಿನಲ್ಲಿ ಮೇಲಿನ ಬ್ಯಾಂಕಿಗೆ ಸಂದಾಯವಾಗುವoತೆ ಡಿ.ಡಿ ಯನ್ನು ಪಡೆದು ಲಗತ್ತಿಸಬೇಕು.

ಅರ್ಹತೆ, ಅನುಭವದ ವಿವರಗಳು ಮತ್ತು ದೃಢೀಕೃತ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯದ ಕುಲಸಚಿವರಿಗೆ ಅರ್ಜಿಗಳನ್ನು ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯದ ದೂ.ಸಂ: 0821-2332703 ಅನ್ನು ಸಂಪರ್ಕಿಸಬಹುದು ಎಂದು ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago