ಮೈಸೂರು

ಮೈಸೂರು ವಸ್ತು ಪ್ರದರ್ಶನ: ವಾರ್ತಾ ಇಲಾಖೆಗೆ ತೃತೀಯ ಬಹುಮಾನ

ಮೈಸೂರು: ದಸರಾ 2024 ರ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರ್ಕಾರದ ಇಲಾಖೆಗಳ ವಿಭಾಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ತೃತೀಯ ಬಹುಮಾನ ದೊರೆತಿದೆ.

ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಜನಸಾಮಾನ್ಯರ ಬದುಕಿನಲ್ಲಿ ಆಗುತ್ತಿರುವ ಗುಣಾತ್ಮಕ ಬದಲಾವಣೆಗಳು,ಮಹಿಳಾ ಸಬಲೀಕರಣಕ್ಕೆ ದೊರೆಯುತ್ತಿರುವ ಪ್ರೋತ್ಸಾಹ , ಯವಜನರಿಗೆ ಸಿಗುತ್ತಿರುವ ಭರವಸೆ ಮೊದಲಾದ ಅಂಶಗಳನ್ನು ಪರಿಣಾಮಕಾರಿಯಾಗಿ ವಸ್ತು ಪ್ರದರ್ಶನದಲ್ಲಿ ಇಲಾಖೆ ನಿರ್ಮಿಸಿದ್ದ ಮಳಿಗೆಯಲ್ಲಿ ಆಕರ್ಷಕ ವಿನ್ಯಾಸಗಳನ್ನು ಅನಾವರಣಗೊಳಿಸಲಾಗಿತ್ತು.

ಇಂದು ಸಂಜೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯೂಬ್ ಖಾನ್ ಅವರು ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದೇಶ್ವರಪ್ಪ ಹಾಗೂ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ  ಗೌರವಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…

2 hours ago

ಹಾಸನದಲ್ಲೂ ಭ್ರಷ್ಟ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…

2 hours ago

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…

2 hours ago

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌…

3 hours ago

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…

3 hours ago