ಮೈಸೂರು

ಮೈಸೂರು: ಜನವರಿ 14 ರಿಂದ ಜನವರಿ 19 ರವರೆಗೆ ಬಹುರೂಪಿ ನಾಟಕೋತ್ಸವ

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಯಶಸ್ವಿಗೆ ಅಧಿಕಾರಿಗಳು ಕೈಜೋಡಿಸಿ – ಡಾ. ಪಿ ಶಿವರಾಜು

ಮೈಸೂರು: ಜನವರಿ 14 ರಿಂದ 19 ವರೆಗೆ ಕರ್ನಾಟಕ ಕಲಾ ಮಂದಿರದಲ್ಲಿ ರಾಷ್ಟ್ರೀಯ ಬಹುರೂಪಿ ನಾಟಕೋತ್ಸವವನ್ನು ಹಮ್ಮಿಕೊಂಡಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೈಜೋಡಿಸುವ ಮೂಲಕ ನಾಟಕೋತ್ಸವವನ್ನು ಯಶಸ್ವಿಗೊಳಿಸಲು ಸಹಕರಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ತಿಳಿಸಿದರು.

ಇಂದು(ಜ.3) ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಬಹುರೂಪಿ ನಾಟಕೋತ್ಸವ -2025ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯಾದ ಮೈಸೂರಿಗೆ ರಂಗಾಯಣ ಹೆಮ್ಮೆಯ ಸಂಕೇತ. ನಾಗರೀಕ ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ನಾಟಕಗಳನ್ನು ಆಯೋಜಿಸಲಾತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಮಹಾನಗರ ಪಾಲಿಕೆಯು ಕಲಾಮಂದಿರ ಹಾಗೂ ರಂಗಾಯಣದ ಸ್ವಚ್ಚತೆ ನೋಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರು, ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು. ಜೊತೆಗೆ ನಗರದ ಪ್ರಮುಖ ಸ್ಥಳಗಳಲ್ಲಿ  ಡಿಜಿಟಲ್ ಸ್ಕ್ರಿನ್ ಮೂಲಕ ಉತ್ಸವದ ಪ್ರಚಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಾಟಕೋತ್ಸವದ ದಿನಗಳಲ್ಲಿ ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧ ಬಡಾವಣೆಗಳಿಗೆ ಸಾರಿಗೆ ಬಸ್ ಸೌಲಭ್ಯ ಒದಗಿಸಬೇಕು. ಶಾಲಾ-ಕಾಲೇಜು, ಶಿಕ್ಷಕರು ಹಾಗೂ ಮಕ್ಕಳು ನಾಟಕೋತ್ಸವದಲ್ಲಿ ಭಾಗವಹಿಸಬೇಕು ಎಂದರು.

ಮಕ್ಕಳ ನಾಟಕೋತ್ಸವಕ್ಕೆ ಪ್ರತ್ಯೇಕ ವೇದಿಕೆ

ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ಮಾತನಾಡಿ, ರಂಗಾಯಣ ಪ್ರಾರಂಭವಾಗಿ 35 ವರ್ಷಗಳು ಸಂದಿವೆ. ಬಹುರೂಪಿ ನಾಟಕೋತ್ಸವದಲ್ಲಿ 6 ದಿನಗಳ ಕಾಲ 24 ನಾಟಕಗಳು ಪ್ರದರ್ಶನವಾಗಲಿವೆ.ಕನ್ನಡದ ಜೊತೆಗೆ  ಬೇರೆ ಬೇರೆ ಭಾಷೆಯ ನಾಟಕಗಳು ಇರಲಿವೆ. ಈ ಬಾರಿ ಮಕ್ಕಳಿಗಾಗಿ ಮಕ್ಕಳ ನಾಟಕೋತ್ಸವಕ್ಕೆ ಪ್ರತ್ಯೇಕವಾಗಿ ಒಂದು ವೇದಿಕೆ ಮಾಡಲಾಗುತ್ತಿದೆ. ಎಲ್ಲಾ ಇಲಾಖೆಗಳ ಸಹಕಾರ ನೀಡುವ ಮೂಲಕ ನಾಟಕೋತ್ಸವ ಯಶಸ್ವಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜವರೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

5 mins ago

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

21 mins ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…

31 mins ago

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

1 hour ago

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

1 hour ago

ನಾಳೆ ಡೆವಿಲ್‌ ಚಿತ್ರ ರಿಲೀಸ್:‌ ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್‌ ಸಂದೇಶ

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌…

1 hour ago