ಮೈಸೂರು : ನಕಲಿ ದಾಖಲೆಗಳ ಮೂಲಕ ಎಸ್ಬಿಐ ಸಿಬ್ಬಂದಿಯನ್ನೇ ದಾರಿ ತಪ್ಪಿಸಿರುವ ಏಳು ಮಂದಿ ಸುಮಾರು 66 ಲಕ್ಷ ರೂ. ಹಣವನ್ನು ಸಾಲವಾಗಿ ಪಡೆದು ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಎನ್ಆರ್ ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ವಂಚಿಸಿರುವ ಬೋಗಾದಿಯ ನಾಗೇಶ್, ಕೆಜಿ ಕೊಪ್ಪಲಿನ ಮಂಜಣ್ಣ, ಗಾಂಧಿನಗರದ ಸಣ್ಣಪ್ಪ, ಬೋಗಾದಿಯ ನವೀನ್ಕುಮಾರ್, ಜಯನಗರದ ದೀಪಾ, ಕ್ಯಾತಮಾರನಹಳ್ಳಿಯ ಶ್ರೀನಿವಾಸ್ ಹಾಗೂ ಮಂಡಿ ಮೊಹಲ್ಲಾದ ಮಂಜುನಾಥ್ ಎಂಬವರ ವಿರುದ್ಧ ಬ್ಯಾಂಕ್ನ ವ್ಯವಸ್ಥಾಪಕಿ ರಮ್ಯ ಎಂಬವರು ದೂರು ದಾಖಲಿಸಿದ್ದಾರೆ.
ಇದನ್ನು ಓದಿ: ಗುಂಡಿ ಜಟಾಪಟಿ : ಡಿನ್ನರ್ ಮೀಟಿಂಗ್ ಬಳಿಕ ಡಿಕೆಶಿಯನ್ನು ಹಾಡಿ ಹೊಗಳಿದ ಉದ್ಯಮಿಗಳು
ಆರೋಪಿಗಳು ಸಾಲ ಪಡೆಯುವ ಉದ್ದೇಶದಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ ವಿವಿಧ ದಿನಾಂಕಗಳಂದು ಎಸ್ಬಿಐ ಬ್ಯಾಂಕ್ಗೆ ನಕಲಿ ದಾಖಲಾತಿಗಳನ್ನು ಸಲ್ಲಿಸಿದ್ದಾರೆ. ಅವುಗಳ ಆಧಾರದ ಮೇಲೆ ಅವರುಗಳಿಗೆ ಸಾಲ ನಿಡಲಾಗಿದೆ.
ನಾಗೇಶ್ ಎಂಬವರು ೯.೪೦ ಲಕ್ಷ ರೂ., ಮಂಜಣ್ಣ ಎಂಬವರು ೯.೫೫ ಲಕ್ಷ ರೂ., ಸಣ್ಣಪ್ಪ ಅವರು ೧೦ ಲಕ್ಷ ರೂ., ನವೀನ್ಕುಮಾರ್ ೯,೨೫ ಲಕ್ಷ ರೂ., ದೀಪಾ ೯.೨೫ ಲಕ್ಷ ರೂ., ಶ್ರೀನಿವಾಸ್ ೯.೨೦ ಲಕ್ಷ ರೂ., ಮಂಜುನಾಥ್ ಎಂಬವರು ೯.೩೦ ಲಕ್ಷ ರೂ. ಸಾಲ ಪಡೆದಿದ್ದಾರೆ.
ಸಾಲ ಪಡೆದ ನಂತರ ಅವರುಗಳು ಸಕಾಲಕ್ಕೆ ಕಂತನ್ನು ಪಾವತಿಸಿಲ್ಲ ಎನ್ನಲಾಗಿದೆ. ಇದೇ ವೇಳೆ ಅವರ ದಾಖಲಾತಿಗಳನ್ನು ಪರಿಶೀಲಿಸಿದ ವೇಳೆ ಅವುಗಳಲ್ಲಿ ಕೆಲವು ನಕಲಿ ಎಂಬುದು ಪತ್ತೆಯಾಗಿದೆ. ಹೀಗಾಗಿ ರಮ್ಯ ಅವರು ಏಳು ಮಂದಿ ವಿರುದ್ಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…
ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ರೂ.೬೦…
ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…
ಟಿ-೨೦ವಿಶ್ವಕಪ್ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…