ಮೈಸೂರು : ನಕಲಿ ದಾಖಲೆಗಳ ಮೂಲಕ ಎಸ್ಬಿಐ ಸಿಬ್ಬಂದಿಯನ್ನೇ ದಾರಿ ತಪ್ಪಿಸಿರುವ ಏಳು ಮಂದಿ ಸುಮಾರು 66 ಲಕ್ಷ ರೂ. ಹಣವನ್ನು ಸಾಲವಾಗಿ ಪಡೆದು ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಎನ್ಆರ್ ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ವಂಚಿಸಿರುವ ಬೋಗಾದಿಯ ನಾಗೇಶ್, ಕೆಜಿ ಕೊಪ್ಪಲಿನ ಮಂಜಣ್ಣ, ಗಾಂಧಿನಗರದ ಸಣ್ಣಪ್ಪ, ಬೋಗಾದಿಯ ನವೀನ್ಕುಮಾರ್, ಜಯನಗರದ ದೀಪಾ, ಕ್ಯಾತಮಾರನಹಳ್ಳಿಯ ಶ್ರೀನಿವಾಸ್ ಹಾಗೂ ಮಂಡಿ ಮೊಹಲ್ಲಾದ ಮಂಜುನಾಥ್ ಎಂಬವರ ವಿರುದ್ಧ ಬ್ಯಾಂಕ್ನ ವ್ಯವಸ್ಥಾಪಕಿ ರಮ್ಯ ಎಂಬವರು ದೂರು ದಾಖಲಿಸಿದ್ದಾರೆ.
ಇದನ್ನು ಓದಿ: ಗುಂಡಿ ಜಟಾಪಟಿ : ಡಿನ್ನರ್ ಮೀಟಿಂಗ್ ಬಳಿಕ ಡಿಕೆಶಿಯನ್ನು ಹಾಡಿ ಹೊಗಳಿದ ಉದ್ಯಮಿಗಳು
ಆರೋಪಿಗಳು ಸಾಲ ಪಡೆಯುವ ಉದ್ದೇಶದಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ ವಿವಿಧ ದಿನಾಂಕಗಳಂದು ಎಸ್ಬಿಐ ಬ್ಯಾಂಕ್ಗೆ ನಕಲಿ ದಾಖಲಾತಿಗಳನ್ನು ಸಲ್ಲಿಸಿದ್ದಾರೆ. ಅವುಗಳ ಆಧಾರದ ಮೇಲೆ ಅವರುಗಳಿಗೆ ಸಾಲ ನಿಡಲಾಗಿದೆ.
ನಾಗೇಶ್ ಎಂಬವರು ೯.೪೦ ಲಕ್ಷ ರೂ., ಮಂಜಣ್ಣ ಎಂಬವರು ೯.೫೫ ಲಕ್ಷ ರೂ., ಸಣ್ಣಪ್ಪ ಅವರು ೧೦ ಲಕ್ಷ ರೂ., ನವೀನ್ಕುಮಾರ್ ೯,೨೫ ಲಕ್ಷ ರೂ., ದೀಪಾ ೯.೨೫ ಲಕ್ಷ ರೂ., ಶ್ರೀನಿವಾಸ್ ೯.೨೦ ಲಕ್ಷ ರೂ., ಮಂಜುನಾಥ್ ಎಂಬವರು ೯.೩೦ ಲಕ್ಷ ರೂ. ಸಾಲ ಪಡೆದಿದ್ದಾರೆ.
ಸಾಲ ಪಡೆದ ನಂತರ ಅವರುಗಳು ಸಕಾಲಕ್ಕೆ ಕಂತನ್ನು ಪಾವತಿಸಿಲ್ಲ ಎನ್ನಲಾಗಿದೆ. ಇದೇ ವೇಳೆ ಅವರ ದಾಖಲಾತಿಗಳನ್ನು ಪರಿಶೀಲಿಸಿದ ವೇಳೆ ಅವುಗಳಲ್ಲಿ ಕೆಲವು ನಕಲಿ ಎಂಬುದು ಪತ್ತೆಯಾಗಿದೆ. ಹೀಗಾಗಿ ರಮ್ಯ ಅವರು ಏಳು ಮಂದಿ ವಿರುದ್ಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…