ಮೈಸೂರು

ಮೈಸೂರು | ನಕಲಿ ದಾಖಲೆ ನೀಡಿ ಬ್ಯಾಂಕ್‌ಗೆ 66 ಲಕ್ಷ ವಂಚನೆ

ಮೈಸೂರು : ನಕಲಿ ದಾಖಲೆಗಳ ಮೂಲಕ ಎಸ್‌ಬಿಐ ಸಿಬ್ಬಂದಿಯನ್ನೇ ದಾರಿ ತಪ್ಪಿಸಿರುವ ಏಳು ಮಂದಿ ಸುಮಾರು 66 ಲಕ್ಷ ರೂ. ಹಣವನ್ನು ಸಾಲವಾಗಿ ಪಡೆದು ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಎನ್‌ಆರ್ ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ವಂಚಿಸಿರುವ ಬೋಗಾದಿಯ ನಾಗೇಶ್, ಕೆಜಿ ಕೊಪ್ಪಲಿನ ಮಂಜಣ್ಣ, ಗಾಂಧಿನಗರದ ಸಣ್ಣಪ್ಪ, ಬೋಗಾದಿಯ ನವೀನ್‌ಕುಮಾರ್, ಜಯನಗರದ ದೀಪಾ, ಕ್ಯಾತಮಾರನಹಳ್ಳಿಯ ಶ್ರೀನಿವಾಸ್ ಹಾಗೂ ಮಂಡಿ ಮೊಹಲ್ಲಾದ ಮಂಜುನಾಥ್ ಎಂಬವರ ವಿರುದ್ಧ ಬ್ಯಾಂಕ್‌ನ ವ್ಯವಸ್ಥಾಪಕಿ ರಮ್ಯ ಎಂಬವರು ದೂರು ದಾಖಲಿಸಿದ್ದಾರೆ.

ಇದನ್ನು ಓದಿ: ಗುಂಡಿ ಜಟಾಪಟಿ : ಡಿನ್ನರ್‌ ಮೀಟಿಂಗ್‌ ಬಳಿಕ ಡಿಕೆಶಿಯನ್ನು ಹಾಡಿ ಹೊಗಳಿದ ಉದ್ಯಮಿಗಳು

ಆರೋಪಿಗಳು ಸಾಲ ಪಡೆಯುವ ಉದ್ದೇಶದಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ ವಿವಿಧ ದಿನಾಂಕಗಳಂದು ಎಸ್‌ಬಿಐ ಬ್ಯಾಂಕ್‌ಗೆ ನಕಲಿ ದಾಖಲಾತಿಗಳನ್ನು ಸಲ್ಲಿಸಿದ್ದಾರೆ. ಅವುಗಳ ಆಧಾರದ ಮೇಲೆ ಅವರುಗಳಿಗೆ ಸಾಲ ನಿಡಲಾಗಿದೆ.

ನಾಗೇಶ್ ಎಂಬವರು ೯.೪೦ ಲಕ್ಷ ರೂ., ಮಂಜಣ್ಣ ಎಂಬವರು ೯.೫೫ ಲಕ್ಷ ರೂ., ಸಣ್ಣಪ್ಪ ಅವರು ೧೦ ಲಕ್ಷ ರೂ., ನವೀನ್‌ಕುಮಾರ್ ೯,೨೫ ಲಕ್ಷ ರೂ., ದೀಪಾ ೯.೨೫ ಲಕ್ಷ ರೂ., ಶ್ರೀನಿವಾಸ್ ೯.೨೦ ಲಕ್ಷ ರೂ., ಮಂಜುನಾಥ್ ಎಂಬವರು ೯.೩೦ ಲಕ್ಷ ರೂ. ಸಾಲ ಪಡೆದಿದ್ದಾರೆ.

ಸಾಲ ಪಡೆದ ನಂತರ ಅವರುಗಳು ಸಕಾಲಕ್ಕೆ ಕಂತನ್ನು ಪಾವತಿಸಿಲ್ಲ ಎನ್ನಲಾಗಿದೆ. ಇದೇ ವೇಳೆ ಅವರ ದಾಖಲಾತಿಗಳನ್ನು ಪರಿಶೀಲಿಸಿದ ವೇಳೆ ಅವುಗಳಲ್ಲಿ ಕೆಲವು ನಕಲಿ ಎಂಬುದು ಪತ್ತೆಯಾಗಿದೆ. ಹೀಗಾಗಿ ರಮ್ಯ ಅವರು ಏಳು ಮಂದಿ ವಿರುದ್ಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

54 seconds ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

7 mins ago

ಪಾರಂಪರಿಕ ಕಟ್ಟಡ ಸಂರಕ್ಷಿಸಿ.. ಪರಂಪರೆ ಉಳಿಸಿ..!

ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…

14 mins ago

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

3 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

3 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

3 hours ago