ಮೈಸೂರು

ಮೈಸೂರು, ಬನ್ನೇರುಘಟ್ಟ ಮೃಗಾಲಯ ಪ್ರವೇಶ ದರ ಹೆಚ್ಚಳ

ಬೆಂಗಳೂರು : ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟ ಮೃಗಾಲಯದ ಪ್ರವೇಶ ದರಗಳನ್ನು ಸರ್ಕಾರ ಪರಿಷ್ಕರಿಸಿದ್ದು, ಶೇ.20ರಷ್ಟು ದರ ಹೆಚ್ಚಳ ಮಾಡಿ ಪ್ರಸ್ತಾವನೆ ಅನುಮೋದನೆಗೆ ಅರಣ್ಯ ಇಲಾಖೆ ಸಚಿವ ಈಶ್ವರ ಬಿ.ಖಂಡ್ರೆ ಸೂಚಿಸಿದರು.

ವಿಕಾಸಸೌಧದಲ್ಲಿ ಗುರುವಾರ ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈವೇಳೆ ಪಶು, ಪಕ್ಷಿಗಳ ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವೇಶದರವನ್ನು ಶೇ.50ರಷ್ಟು ಹೆಚ್ಚಿಸಬೇಕೆಂಬ ಪ್ರಾಧಿಕಾರದ ಪ್ರಸ್ತಾವನೆಗೆ ಪ್ರತಿಕ್ರಿಯಿಸಿದ ಈಶ್ವರ ಖಂಡ್ರೆ, ಏಕಾ ಏಕಿ ಶೇ.50ರಷ್ಟು ಹೆಚ್ಚಳ ಮಾಡುವುದು ಸರಿಯಲ್ಲ. ಶೇ.20ರಷ್ಟು ಮಾತ್ರವೇ ದರ ಹೆಚ್ಚಳ ಮಾಡಿ ಎಂದು ಪ್ರಸ್ತಾವನೆಗೆ ಅನುಮೋದನೆ ನೀಡಿ, ಸಫಾರಿ ದರ ಹೆಚ್ಚಿಸದಂತೆ ಸೂಚಿಸಿದರು.

ವನ್ಯಜೀವಿ ವೀಕ್ಷಣೆಗೆ ದೇಶ ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಮೃಗಾಲಯದಲ್ಲಿ ಮತ್ತು ಜೈವಿಕ ಉದ್ಯಾನದಲ್ಲಿ ಶುದ್ಧ ಕುಡಿಯುವ ನೀರು, ವಿಶ್ರಾಂತಿ ಧಾಮ, ಪುರುಷ ಮತ್ತು ಮಹಿಳೆಯರ ಶೌಚಾಲಯದ ಜೊತೆಗೆ ಹೆಚ್ಚಿನ ಸೌಲಭ್ಯ, ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.

ಯಾವುದೇ ಕಾರಣಕ್ಕೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಮೃಗಾಲಯ ಮತ್ತು ಜೈವಿಕ ಉದ್ಯಾನ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲೂ ಸಚಿವರು ಮಂಡಳಿಯ ಸಭೆಯಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಸಭೆಯಲ್ಲಿ ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ. ರೇ, ಅಧಿಕಾರಿಗಳಾದ ಸುನೀಲ್ ಪಾಂವಾರ್, ಸೂರ್ಯಸೇನ್ ಮತ್ತಿತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

5 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

5 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

10 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago