ಮೈಸೂರು

ಮೈಸೂರು, ಬನ್ನೇರುಘಟ್ಟ ಮೃಗಾಲಯ ಪ್ರವೇಶ ದರ ಹೆಚ್ಚಳ

ಬೆಂಗಳೂರು : ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟ ಮೃಗಾಲಯದ ಪ್ರವೇಶ ದರಗಳನ್ನು ಸರ್ಕಾರ ಪರಿಷ್ಕರಿಸಿದ್ದು, ಶೇ.20ರಷ್ಟು ದರ ಹೆಚ್ಚಳ ಮಾಡಿ ಪ್ರಸ್ತಾವನೆ ಅನುಮೋದನೆಗೆ ಅರಣ್ಯ ಇಲಾಖೆ ಸಚಿವ ಈಶ್ವರ ಬಿ.ಖಂಡ್ರೆ ಸೂಚಿಸಿದರು.

ವಿಕಾಸಸೌಧದಲ್ಲಿ ಗುರುವಾರ ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈವೇಳೆ ಪಶು, ಪಕ್ಷಿಗಳ ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವೇಶದರವನ್ನು ಶೇ.50ರಷ್ಟು ಹೆಚ್ಚಿಸಬೇಕೆಂಬ ಪ್ರಾಧಿಕಾರದ ಪ್ರಸ್ತಾವನೆಗೆ ಪ್ರತಿಕ್ರಿಯಿಸಿದ ಈಶ್ವರ ಖಂಡ್ರೆ, ಏಕಾ ಏಕಿ ಶೇ.50ರಷ್ಟು ಹೆಚ್ಚಳ ಮಾಡುವುದು ಸರಿಯಲ್ಲ. ಶೇ.20ರಷ್ಟು ಮಾತ್ರವೇ ದರ ಹೆಚ್ಚಳ ಮಾಡಿ ಎಂದು ಪ್ರಸ್ತಾವನೆಗೆ ಅನುಮೋದನೆ ನೀಡಿ, ಸಫಾರಿ ದರ ಹೆಚ್ಚಿಸದಂತೆ ಸೂಚಿಸಿದರು.

ವನ್ಯಜೀವಿ ವೀಕ್ಷಣೆಗೆ ದೇಶ ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಮೃಗಾಲಯದಲ್ಲಿ ಮತ್ತು ಜೈವಿಕ ಉದ್ಯಾನದಲ್ಲಿ ಶುದ್ಧ ಕುಡಿಯುವ ನೀರು, ವಿಶ್ರಾಂತಿ ಧಾಮ, ಪುರುಷ ಮತ್ತು ಮಹಿಳೆಯರ ಶೌಚಾಲಯದ ಜೊತೆಗೆ ಹೆಚ್ಚಿನ ಸೌಲಭ್ಯ, ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.

ಯಾವುದೇ ಕಾರಣಕ್ಕೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಮೃಗಾಲಯ ಮತ್ತು ಜೈವಿಕ ಉದ್ಯಾನ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲೂ ಸಚಿವರು ಮಂಡಳಿಯ ಸಭೆಯಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಸಭೆಯಲ್ಲಿ ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ. ರೇ, ಅಧಿಕಾರಿಗಳಾದ ಸುನೀಲ್ ಪಾಂವಾರ್, ಸೂರ್ಯಸೇನ್ ಮತ್ತಿತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

17 mins ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

18 mins ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

1 hour ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

1 hour ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

2 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

3 hours ago