ಮೈಸೂರು

ಮೈಸೂರು, ಬನ್ನೇರುಘಟ್ಟ ಮೃಗಾಲಯ ಪ್ರವೇಶ ದರ ಹೆಚ್ಚಳ

ಬೆಂಗಳೂರು : ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟ ಮೃಗಾಲಯದ ಪ್ರವೇಶ ದರಗಳನ್ನು ಸರ್ಕಾರ ಪರಿಷ್ಕರಿಸಿದ್ದು, ಶೇ.20ರಷ್ಟು ದರ ಹೆಚ್ಚಳ ಮಾಡಿ ಪ್ರಸ್ತಾವನೆ ಅನುಮೋದನೆಗೆ ಅರಣ್ಯ ಇಲಾಖೆ ಸಚಿವ ಈಶ್ವರ ಬಿ.ಖಂಡ್ರೆ ಸೂಚಿಸಿದರು.

ವಿಕಾಸಸೌಧದಲ್ಲಿ ಗುರುವಾರ ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈವೇಳೆ ಪಶು, ಪಕ್ಷಿಗಳ ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವೇಶದರವನ್ನು ಶೇ.50ರಷ್ಟು ಹೆಚ್ಚಿಸಬೇಕೆಂಬ ಪ್ರಾಧಿಕಾರದ ಪ್ರಸ್ತಾವನೆಗೆ ಪ್ರತಿಕ್ರಿಯಿಸಿದ ಈಶ್ವರ ಖಂಡ್ರೆ, ಏಕಾ ಏಕಿ ಶೇ.50ರಷ್ಟು ಹೆಚ್ಚಳ ಮಾಡುವುದು ಸರಿಯಲ್ಲ. ಶೇ.20ರಷ್ಟು ಮಾತ್ರವೇ ದರ ಹೆಚ್ಚಳ ಮಾಡಿ ಎಂದು ಪ್ರಸ್ತಾವನೆಗೆ ಅನುಮೋದನೆ ನೀಡಿ, ಸಫಾರಿ ದರ ಹೆಚ್ಚಿಸದಂತೆ ಸೂಚಿಸಿದರು.

ವನ್ಯಜೀವಿ ವೀಕ್ಷಣೆಗೆ ದೇಶ ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಮೃಗಾಲಯದಲ್ಲಿ ಮತ್ತು ಜೈವಿಕ ಉದ್ಯಾನದಲ್ಲಿ ಶುದ್ಧ ಕುಡಿಯುವ ನೀರು, ವಿಶ್ರಾಂತಿ ಧಾಮ, ಪುರುಷ ಮತ್ತು ಮಹಿಳೆಯರ ಶೌಚಾಲಯದ ಜೊತೆಗೆ ಹೆಚ್ಚಿನ ಸೌಲಭ್ಯ, ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.

ಯಾವುದೇ ಕಾರಣಕ್ಕೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಮೃಗಾಲಯ ಮತ್ತು ಜೈವಿಕ ಉದ್ಯಾನ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲೂ ಸಚಿವರು ಮಂಡಳಿಯ ಸಭೆಯಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಸಭೆಯಲ್ಲಿ ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ. ರೇ, ಅಧಿಕಾರಿಗಳಾದ ಸುನೀಲ್ ಪಾಂವಾರ್, ಸೂರ್ಯಸೇನ್ ಮತ್ತಿತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

12 hours ago