ಮೈಸೂರು

ಮೈಸೂರು| ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಪ್ರತಿಭಟನೆ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಖಾಸಗಿ ವಾಹಿನಿ ಸಂದರ್ಶನವೊಂದರಲ್ಲಿ ಸಂವಿಧಾನ ಬದಲಾವಣೆ ಬಗ್ಗೆ ನೀಡಿದ ಹೇಳಿಕೆ ಕುರಿತು ನಗರದ ವಿವಿಧ ಕಡೆಗಳಲ್ಲಿ ಬಿಜೆಪಿಯ ಮುಖಂಡಉ ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಇಂದು(ಮಾರ್ಚ್.‌25) ಕೆ.ಆರ್‌.ಕ್ಷೇತ್ರ, ಎನ್‌.ಆರ್‌.ಕ್ಷೇತ್ರ, ಚಾಮರಾಜ ಕ್ಷೇತ್ರ ಸೇರಿದಂತೆ ವಿವಿಧ ಕಡೆಗಳಲ್ಲಿ ಬಿಜೆಪಿಯೂ ಪ್ರತಿಭಟನೆ ನಡೆಸಿತು. ಅಂತೆಯೇ ಮೈಸೂರಿನ ಟೌನ್‌ ಹಾಲ್‌ ಬಳಿ ಮಾಜಿ ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಡಿ.ಕೆ.ಶಿವಕುಮಾರ್ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಸಂವಿಧಾನ ಬದಲಾವಣೆ ಕುರಿತು ಡಿಕೆಶಿ ಹೇಳಿಕೆ ಖಂಡಿಸಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಶಾಸಕ ಎಲ್‌.ನಾಗೇಂದ್ರ ಅವರು, ಮುಸಲ್ಮಾನರಿಗೆ ಮೀಸಲಾತಿ ನೀಡುವುದಕ್ಕೆ ಸಂವಿಧಾನ ಬದಲಾವಣೆ ಮಾಡುತ್ತೇವೆಂದು ಹೇಳುತ್ತಾರೆ. ಆದರೆ ನಾವು ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲು ಬಿಡುವುದಿಲ್ಲ. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಲು ಹೊರಟರೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಇನ್ನು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡುವವರೆಗೂ ಬಿಡುವುದಿಲ್ಲ. ಮೈಸೂರಿನಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ನಿರಂತ ಧರಣಿ ನಡೆಸುತ್ತೇವೆ ಎಂದರು.

 

ಅರ್ಚನ ಎಸ್‌ ಎಸ್

Recent Posts

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

5 mins ago

ಡಿಜಿಟಲ್‌ ಪಾವತಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರ್‌ಬಿಐ

ನವದೆಹಲಿ: ಡಿಜಿಟಲ್‌ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೊಸ ಮಾರ್ಗಸೂಚಿ…

13 mins ago

ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ನಾಳೆ(ಏಪ್ರಿಲ್.‌1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ…

39 mins ago

ಹಾಸನ: ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಮಗ: ಕಾರಣ ಇಷ್ಟೇ

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ…

51 mins ago

ಮಳೆಗಾಲ ಸಮೀಪಿಸುತ್ತಿದ್ದಂತೆ ಎಚ್ಚೆತ್ತ ಅರಮನೆ ಆಡಳಿತ ಮಂಡಳಿ: ಕೋಟೆ ದುರಸ್ತಿ ಕಾರ್ಯ ಪ್ರಗತಿಯಲ್ಲಿ

ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…

2 hours ago

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಸಮ್ಮತಿ: ಮಿತ್ರ ರಾಷ್ಟ್ರಗಳಿಗಷ್ಟೇ ಅನ್ವಯ

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…

2 hours ago