ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಾಸಗಿ ವಾಹಿನಿ ಸಂದರ್ಶನವೊಂದರಲ್ಲಿ ಸಂವಿಧಾನ ಬದಲಾವಣೆ ಬಗ್ಗೆ ನೀಡಿದ ಹೇಳಿಕೆ ಕುರಿತು ನಗರದ ವಿವಿಧ ಕಡೆಗಳಲ್ಲಿ ಬಿಜೆಪಿಯ ಮುಖಂಡಉ ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಇಂದು(ಮಾರ್ಚ್.25) ಕೆ.ಆರ್.ಕ್ಷೇತ್ರ, ಎನ್.ಆರ್.ಕ್ಷೇತ್ರ, ಚಾಮರಾಜ ಕ್ಷೇತ್ರ ಸೇರಿದಂತೆ ವಿವಿಧ ಕಡೆಗಳಲ್ಲಿ ಬಿಜೆಪಿಯೂ ಪ್ರತಿಭಟನೆ ನಡೆಸಿತು. ಅಂತೆಯೇ ಮೈಸೂರಿನ ಟೌನ್ ಹಾಲ್ ಬಳಿ ಮಾಜಿ ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಡಿ.ಕೆ.ಶಿವಕುಮಾರ್ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಸಂವಿಧಾನ ಬದಲಾವಣೆ ಕುರಿತು ಡಿಕೆಶಿ ಹೇಳಿಕೆ ಖಂಡಿಸಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಶಾಸಕ ಎಲ್.ನಾಗೇಂದ್ರ ಅವರು, ಮುಸಲ್ಮಾನರಿಗೆ ಮೀಸಲಾತಿ ನೀಡುವುದಕ್ಕೆ ಸಂವಿಧಾನ ಬದಲಾವಣೆ ಮಾಡುತ್ತೇವೆಂದು ಹೇಳುತ್ತಾರೆ. ಆದರೆ ನಾವು ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲು ಬಿಡುವುದಿಲ್ಲ. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಲು ಹೊರಟರೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಇನ್ನು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡುವವರೆಗೂ ಬಿಡುವುದಿಲ್ಲ. ಮೈಸೂರಿನಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ನಿರಂತ ಧರಣಿ ನಡೆಸುತ್ತೇವೆ ಎಂದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…