ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಾಸಗಿ ವಾಹಿನಿ ಸಂದರ್ಶನವೊಂದರಲ್ಲಿ ಸಂವಿಧಾನ ಬದಲಾವಣೆ ಬಗ್ಗೆ ನೀಡಿದ ಹೇಳಿಕೆ ಕುರಿತು ನಗರದ ವಿವಿಧ ಕಡೆಗಳಲ್ಲಿ ಬಿಜೆಪಿಯ ಮುಖಂಡಉ ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಇಂದು(ಮಾರ್ಚ್.25) ಕೆ.ಆರ್.ಕ್ಷೇತ್ರ, ಎನ್.ಆರ್.ಕ್ಷೇತ್ರ, ಚಾಮರಾಜ ಕ್ಷೇತ್ರ ಸೇರಿದಂತೆ ವಿವಿಧ ಕಡೆಗಳಲ್ಲಿ ಬಿಜೆಪಿಯೂ ಪ್ರತಿಭಟನೆ ನಡೆಸಿತು. ಅಂತೆಯೇ ಮೈಸೂರಿನ ಟೌನ್ ಹಾಲ್ ಬಳಿ ಮಾಜಿ ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಡಿ.ಕೆ.ಶಿವಕುಮಾರ್ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಸಂವಿಧಾನ ಬದಲಾವಣೆ ಕುರಿತು ಡಿಕೆಶಿ ಹೇಳಿಕೆ ಖಂಡಿಸಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಶಾಸಕ ಎಲ್.ನಾಗೇಂದ್ರ ಅವರು, ಮುಸಲ್ಮಾನರಿಗೆ ಮೀಸಲಾತಿ ನೀಡುವುದಕ್ಕೆ ಸಂವಿಧಾನ ಬದಲಾವಣೆ ಮಾಡುತ್ತೇವೆಂದು ಹೇಳುತ್ತಾರೆ. ಆದರೆ ನಾವು ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲು ಬಿಡುವುದಿಲ್ಲ. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಲು ಹೊರಟರೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಇನ್ನು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡುವವರೆಗೂ ಬಿಡುವುದಿಲ್ಲ. ಮೈಸೂರಿನಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ನಿರಂತ ಧರಣಿ ನಡೆಸುತ್ತೇವೆ ಎಂದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…